ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ.ದ.ಸ.ಸ,ದೋರನಹಳ್ಳಿ ಗ್ರಾಮದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ

ಯಾದಗಿರಿ:ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಭೆ ಕರೆಯಲಾಗಿತ್ತು.
ಈ ಸಭೆಯ ಅಧ್ಯಕ್ಷತೆಯನ್ನು ತಾಲೂಕ ಅಧ್ಯಕ್ಷರಾದ ಮಲ್ಲಿನಾಥ್ ಬಡಿಗೇರ್ ಅವರು ವಹಿಸಿದರು. ಅತಿಥಿಗಳಾಗಿ ರಾಜ್ಯ ಸಂಘಟನಾ ಕಾರ್ಯ ದರ್ಶಿಯಾದ ಹೊನ್ನಪ್ಪ ಗಂಗನಾಳ ಕಲ್ಬುರ್ಗಿ, ವಿಭಾಗೀಯ ಅಧ್ಯಕ್ಷರಾದ ಸುಭಾಷ್ ತಳವಾರ್, ಜಿಲ್ಲಾ ಅಧ್ಯಕ್ಷರಾದ ಚಂದ್ರಶೇಖರ್ ಬೇವಿನಳ್ಳಿ ಉಪಸ್ಥಿತರಿದ್ದರು ಸಭೆಯಲ್ಲಿ ಹೋಬಳಿ ಶಾಖೆಯ ಅಧ್ಯಕ್ಷರಾಗಿ ಹನುಮಂತ ಕೊಂಬಿನ, ಉಪಾಧ್ಯಕ್ಷರಾಗಿ ಮಲ್ಲಪ್ಪ ರೆಡ್ಡಿ,ಸಂಘಟನಾ ಕಾರ್ಯ ದರ್ಶಿಯಾಗಿ ಅಂಬಣ್ಣ ಮಾಗನೂರು, ಭೀಮ್ ರೆಡ್ಡಿ ಮಡ್ನಾಳ್,ಪ್ರಧಾನ ಕಾರ್ಯ ದರ್ಶಿಯಾಗಿ ಮಂಜು ರೆಡ್ಡಿ,ಖಜಂಚಿಯಾಗಿ ಭೀಮರಾಯ ಬಡಿಗೇರ್,ಗ್ರಾಮ ಶಾಖೆ ಅಧ್ಯಕ್ಷರಾಗಿ ಶ್ರೀಶೈಲ್ ರೆಡ್ಡಿ,ಉಪಾಧ್ಯಕ್ಷರಾಗಿ ಅಂಬರೀಶ್ ಬಡಿಗೇರ್ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ರಾಜ್ಯ ಸಂಘಟನೆ ಕಾರ್ಯದರ್ಶಿಯಾದ ಹೊನ್ನಪ್ಪ ಗಂಗನಾಳ ಅನುಮೋದನೆ ಮಾಡಿದರು ನಂತರ ದೋರನಹಳ್ಳಿ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಲಾಯಿತು ರಾತ್ರಿ ಸಮಯದಲ್ಲಿ ಯಾವುದೇ ಒಬ್ಬ ವೈದ್ಯರೂ ಕೂಡ ಇರುವುದಿಲ್ಲ ಎಂದು ದೋರನಹಳ್ಳಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಕೂಡಲೇ ತಾಲೂಕ ವೈದ್ಯಾಧಿಕಾರಿಗಳಿಗೆ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಫೋನ್ ಕರೆ ಮಾಡಿದರೂ ಅಧಿಕಾರಿಗಳು ಬೇಜವಾಬ್ದಾರಿ ತನದಿಂದ ಉತ್ತರ ನೀಡುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯವರು ಆರೋಪಿಸಿದರು ಆದರೆ ಮುಂದಿನ ದಿನಗಳಲ್ಲಿ ನಮ್ಮ ಸಂಘದ ವತಿಯಿಂದ ಅಧಿಕಾರಿಗಳ ವಿರುದ್ಧ ಹೋರಾಟ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ