ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಸೊರಬ ತಾಲೂಕ ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆ ಪ್ರತಿಭಟನೆ

ಸೊರಬ:ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ವಿರುದ್ದ ಅಕ್ಷಮ್ಯವಾದ ಮಾತುಗಳನ್ನಾಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕೂಡಲೇ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಸೊರಬ ತಾಲೂಕ ವೀರಶೈವ ಲಿಂಗಾಯಿತ ಸಂಘಟನಾ ವೇದಿಕೆ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಬಿ.ಎಸ್ ಯಡಿಯೂರಪ್ಪ ಮತ್ತು ಶಾಮನೂರು ಶಿವಶಂಕರಪ್ಪ ನಮ್ಮ ಸಮಾಜದ ಪ್ರಶ್ನಾತೀತ ನಾಯಕರು ವೀರಶೈವ ಸಮಾಜಕ್ಕೆ ಅವರಿಬ್ಬರ ಕೊಡುಗೆ ಅಪಾರವಾಗಿದೆ ನಮ್ಮ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡವುದನ್ನು ನಾವು ಸಹಿಸುವುದಿಲ್ಲ.ಶಾಸಕ ಗೋಪಾಲ ಕೃಷ್ಣ ಬೇಳೂರು ಅವರನ್ನು ಶಾಸಕರನ್ನಾಗಿ ಮಾಡಿದ್ದೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂತಹ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆತರುವುದಿಲ್ಲ ಅವರನ್ನು ಶಾಸಕರನ್ನಾಗಿ ಮಾಡಲು ಲಿಂಗಾಯಿತ ಸಮಾಜದ ಕೊಡುಗೆಯೂ ಸಾಕಷ್ಟು ಇದೆ ಎಂಬುದನ್ನು ಅವರು ಅರಿಯಬೇಕು ಇವರ ಹೇಳಿಕೆಯಿಂದ ರಾಷ್ಟ್ರಾದ್ಯಂತ ನಮ್ಮ ಸಮುದಾಯಕ್ಕೆ ಸಹಿಸಲಾಗದಷ್ಟು ನೋವುಂಟಾಗಿದೆ.ಆದ್ದರಿಂದ ತಕ್ಷಣ ಮುಖ್ಯಮಂತ್ರಿಗಳು ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಬಹಿರಂಗವಾಗಿ ವೀರಶೈವ ಲಿಂಗಾಯಿತ ಸಮುದಾಯಕ್ಕೆ ಕ್ಷಮೆ ಕೇಳಬೇಕು, ಇಲ್ಲವಾದರೆ ಇದರ ಬಗ್ಗೆ ರಾಷ್ಟ್ರಾದ್ಯಂತ ಸಮುದಾಯವು ಹೋರಾಟವನ್ನು ನಡೆಸುವುದು ಮತ್ತು ಬೆಂಗಳೂರಿನ ಅವರ ನಿವಾಸದ ಮುಂದೆ ಧರಣಿ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.ಇದಕ್ಕೂ ಮೊದಲು ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಮುಖ್ಯ ಬೀದಿಯಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದರು.ಈ ಸಂದರ್ಭದಲ್ಲಿ
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಧ್ಯ ಕರ್ನಾಟಕ ಅಧ್ಯಕ್ಷ ಸಿ.ಪಿ.ಈರೇಶಗೌಡ,ತಾಲೂಕು ಅಧ್ಯಕ್ಷ ಪಂಚಾಕ್ಷರಯ್ಯ ಬೆದವಟ್ಟಿ ಪ್ರಮುಖರಾದ ಅಶೋಕ ನಾಯ್ಕ್ ಅಂಡಿಗೆ,ನಾಗರಾಜ ಗುತ್ತಿ,ನಟರಾಜ್ ಉಪ್ಪಿನ್,ಚಂದ್ರಶೇಖರ ನಿಜಗುಣ, ವಿಜಯಕುಮಾರ ನೇರಲಗಿ,ವಿಶ್ವನಾಥ್, ಲಿಂಗರಾಜ.ಡಿ,ಆಶಿಕ್ ನಾಗಪ್ಪ,ಸಂದೀಪ್, ಮಲ್ಲೇಶಗೌಡ,ನಿರಂಜನ,ಪ್ರಕಾಶ್,ಪ್ರದೀಪ್ ಗೌಡ, ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ವರದಿ:ಸಂದೀಪ ಯು.ಎಲ್,ಕರುನಾಡ ಕಂದ ನ್ಯೂಸ್,ಸೊರಬ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ