ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಿ.ಸಿ.ಸಿ ಬ್ಯಾಂಕಿನಲ್ಲಿ ಮೂಲಭೂತ ಸೌಕರ್ಯದ ಕೊರತೆ:ಭೀಮಣ್ಣಗೌಡ ಕಟ್ಟಿಮನಿ ಆಗ್ರಹ

ಯಾದಗಿರಿ ಜಿಲ್ಲೆಯ ಶಹಾಪುರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಭೀಮಣ್ಣಗೌಡ ಕಟ್ಟಿಮನಿ ಅವರು ಶಹಾಪುರ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಕನಿಷ್ಠ ಮೂಲಭೂತ ಸೌಕರ್ಯ ಇಲ್ಲದೆ ಬ್ಯಾಂಕಿಗೆ ಬರುವ ಗ್ರಾಹಕರಿಗೆ ಕುಡಿಯಲು ನೀರು, ಶೌಚಾಲಯ ಕುಳಿತುಕೊಳ್ಳಲು ಕುರ್ಚಿ ಹಾಗೂ ಬ್ಯಾಂಕಿನ ಮುಂಭಾಗದಲ್ಲಿ ಒಂದಿಂಚು ನೆರಳು ಇಲದೇ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಆದರೂ ಬ್ಯಾಂಕಿನ ವ್ಯವಸ್ಥಾಪಕ ಕಣ್ಣಿಗೆ ಕಂಡರೂ ಕಾಣದಂತೆ ಇರುವುದು ನಾಚಿಕೆಗೇಡಿನ ಸಂಗತಿ ಎಂದು ಭೀಮಣ್ಣಗೌಡ ಕಟ್ಟಿಮನಿ ಹೇಳಿದರು.
ಡಿ.ಸಿ.ಸಿ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಬ್ಯಾಂಕಿಗೆ ಬರುವ ಗ್ರಾಹಕರಿಗೆ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ,ಗ್ರಾಹಕರಿಗೆ ಟೋಕನ್ ನಂಬರ್ ಕೂಡುವುದು ಸರತಿ ಸಾಲಿನಲ್ಲಿ ಬರುವಂತೆ ಕ್ರಮ ಕೈಗೊಳ್ಳಬೇಕು ಮತ್ತು ಟೋಕನ್ ನಂಬರ್ ಕೂಗಿ ಕರೆಯುವ ವ್ಯವಸ್ಥೆ ಮಾಡಬೇಕು,ಒಂದು ವಾರದ ಒಳಗೆ ಗ್ರಾಹಕರಿಗೆ ತೊಂದರೆ ಆಗದಂತೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ನೂರಾರು ರೈತರು ಮತ್ತು ಕಾರ್ಮಿಕರು ಸೇರಿ ಡಿ.ಸಿ.ಸಿ ಬ್ಯಾಂಕ್ ಮುಂದೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಭೀಮಣ್ಣಗೌಡ ಕಟ್ಟಿಮನಿ ಎಚ್ಚರಿಕೆ ನೀಡಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಭೀಮಣ್ಣಗೌಡ ಕಟ್ಟಿಮನಿ,ತಾಲೂಕ ಅಧ್ಯಕ್ಷರಾದ ನಾಗರಾಜ ರಾಕಂಗೇರಾ,ಪ್ರಧಾನ ಕಾರ್ಯದರ್ಶಿಯಾದ ಲಿಂಗಪ್ಪ ನಗನೂರು, ಉಪಾಧ್ಯಕ್ಷರಾದ ಯಲ್ಲಪ್ಪ,ಮಲ್ಲಪ್ಪ ನಾಯ್ಕೋಡಿ, ಬಸ್ಸು, ಶಿವಾಜಿ,ಶರಣು ವಡಗೇರಾ,ಕಾರ್ಮಿಕ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಮರಕಲ್,ಸಂಗಣ್ಣ ಗೌಡ,ರೈತ ಸಂಘದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ