ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಳೆ ಇಲ್ಲದೆ ಒಣಗುತ್ತಿರುವ ಸಸಿಗಳಿಗೆ ಟ್ಯಾಂಕರ್ ಮೂಲಕ ನೀರುಣಿಸಿ ಜೀವ ತುಂಬಿದ ವನಸಿರಿ ತಂಡ

ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದ ರಸ್ತೆ ಬದಿಯ ಅಕ್ಕಪಕ್ಕದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ನೆಡಲಾದ ಸಸಿಗಳಿಗೆ ವನಸಿರಿ ಫೌಂಡೇಶನ್ ಸದಸ್ಯರು ನೀರುಣಿಸಿದರು.
ಮಲ್ಲಾಪುರ ಗ್ರಾಮದ ರಸ್ತೆಯ ಅಕ್ಕಪಕ್ಕದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ನೆಡಲಾಗಿದ್ದ ಸಸಿಗಳು ಮಳೆಯ ಕೊರತೆಯಿಂದ ಸಸಿಗಳು ಒಣಗುವ ಸ್ಥಿತಿಯಲ್ಲಿದ್ದವು.ಇವುಗಳಿಗೆ ಸ್ವತಃ ತಾವೇ ಟ್ಯಾಂಕರ್ ಮೂಲಕ ನೀರುಣಿಸಲು ಮುಂದಾದರು. ಇವರ ಪರಿಸರ ಪ್ರೇಮಕ್ಕೆ ಸಾರ್ವಜನಿಕರ ವಲಯದಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಯಿತು.
ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪುರ ಸಸಿಗಳಿಗೆ ನೀರುಣಿಸಿ ಮಾತನಾಡಿ ರಾಜ್ಯಾದ್ಯಂತ ಈ ಬಾರಿ ಮಳೆ ಬಾರದೆ ಅರಣ್ಯ ಇಲಾಖೆ ಹಾಗೂ ಸಂಘ ಸಂಸ್ಥೆಗಳು, ಪರಿಸರ ಪ್ರೇಮಿಗಳು ನೆಟ್ಟಿರುವ ಸಸಿಗಳು ಒಣಗುವ ಸ್ಥಿತಿಯಲ್ಲಿವೆ ಮಳೆಗಾಲ ಇಲ್ಲದಿರುವುದರಿಂದ ಭೂಮಿಯ ತಾಪಮಾನ ಕೂಡಾ ಏರುಪೇರಾಗಿದೆ ಕಲ್ಯಾಣ ಕರ್ನಾಟಕದಲ್ಲಿ ಕೂಡಾ ಬಿಸಿಲಿನ ಬೇಗೆಯಿಂದ ಜನರು ತತ್ತರಿಸುವಂತಾಗಿದೆ.ಮನುಷ್ಯರಾದ ನಾವುಗಳು ಮಾತಾಡುವ ಮೂಲಕ ನೀರು ಖರೀದಿಸಿ ಕುಡಿಯುತ್ತೇವೆ ಇಂತಹ ಸಂದರ್ಭದಲ್ಲಿ ಮಾತುಗಳನ್ನಾಡದ ಸಸಿಗಳು ನೀರಿಲ್ಲದೆ ಒಣಗಿ ತನ್ನ ಜೀವನವನ್ನು ಕಳೆದುಕೊಳ್ಳುವ ಸ್ಥಿತಯಲ್ಲಿವೆ ದಯವಿಟ್ಟು ಎಲ್ಲಾ ಸಂಘ ಸಂಸ್ಥೆಗಳು,ಅರಣ್ಯ ಇಲಾಖೆಯ ಸಿಬ್ಬಂದಿಗಳು,ಪರಿಸರ ಪ್ರೇಮಿಗಳು ಈ ಬಿರು ಬಿಸಿಲಿನಿಂದ ನೀರಿಲ್ಲದೆ ಒಣಗುತ್ತಿರುವ ಸಸಿಗಳಿಗೆ ಟ್ಯಾಂಕರ್ ಮೂಲಕ ಅಥವಾ ತಮ್ಮ ಹತ್ತಿರದ ಕೆರೆಕಟ್ಟೆಗಳಲ್ಲಿನ ನೀರನ್ನು ಮೋಟಾರು ಮೂಲಕ ಎತ್ತಿಹಾಕುವ ಮೂಲಕ,ಸಸಿಗಳಿಗೆ ನೀರುಣಿಸಿ ಸಸ್ಯಗಳ ಬೆಳವಣಿಗೆಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಅದ್ಯಕ್ಷರಾದ ಅಮರೇಗೌಡ ಮಲ್ಲಾಪುರ ಮುದಿಯಪ್ಪ ಹೊಸಹಳ್ಳಿ ಕ್ಯಾಂಪ್,ವೀರೇಶ ಕೆ.ಮಂಜುನಾಥ ನಾಯಕ ಇನ್ನಿತರರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ