ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಚಿತ ಆರೋಗ್ಯ ತಪಾಸಣಾ ಶಿಬಿರ

ರಾಯಚೂರು ಜಿಲ್ಲೆಯ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರವೆನ್ಷನ್ ಸೊಸೈಟಿ ಸೆಂಟ್ ಲುಕ್ ಮೆಡಿಕಲ್ ಸೊಸೈಟಿ ಸಂಪರ್ಕ ಕಾರ್ಯಕರ್ತ ಯೋಜನೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ತುರವಿಹಾಳ ಗ್ರಾಮ ಪಂಚಾಯತ ಗುಂಜಳ್ಳಿ ಅವರ ಸಂಯುಕ್ತ ಆಶ್ರಯದಲ್ಲಿ ಹೊಸಹಳ್ಳಿ ಕೆ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಸಂಪರ್ಕ ಕಾರ್ಯಕರ್ತ ಯೋಜನೆ ಕುರಿತು ಮಾತನಾಡಿದ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾದ ಶ್ರೀ ನಾಗರಾಜ್ ಅವರು ಮಾತನಾಡಿ ಸರ್ಕಾರ 2030 ರ ಒಳಗೆ ದೇಶದಲ್ಲಿ ಎಚ್ಐವಿ ಅನ್ನು ಸೊನ್ನೆಗೆ ತರುವ ಗುರಿ ಹೊಂದಿದ್ದು ಆ ನಿಟ್ಟಿನಲ್ಲಿ ರಾಯಚೂರು ಜಿಲ್ಲೆಯಲ್ಲಿ 100 ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು ಸಂಪರ್ಕ ಕಾರ್ಯಕರ್ತ ಯೋಜನೆಯನ್ನು ಅನುಷ್ಠಾನಗೊಳಿಸುತ್ತದೆ ಹಳ್ಳಿಗಳಲ್ಲಿ ಅಪಾಯಕಾರಿ ನಡವಳಿಕೆ ಉಳ್ಳ,ಅಪಾಯದ ಹಂಚಿನಲ್ಲಿರುವ ಜನರನ್ನು ಪತ್ತೆ ಹಚ್ಚಿ ಅವರಿಗೆ ಹೆಚ್ ಐ ವಿ ರಕ್ತ ತಪಾಸಣೆಗೆ ಮಾಡಿಸುವುದಲ್ಲದೆ ಸರ್ಕಾರದ ಇತರ ಆರೋಗ್ಯ ಸೇವೆಗಳಿಗೆ ಲಿಂಕ್ ಮಾಡಿಸಲಾಗುತ್ತದೆ ಎಂದು ಹೇಳಿದರು.
ಆರೋಗ್ಯ ಕೇಂದ್ರದ PHCO ಶ್ರೀಮತಿ ಮೊದಿನಬೀ ಯವರು ಮಾತನಾಡಿ ಜನರು ಆರೋಗ್ಯ ಉಚಿತ ಆರೋಗ್ಯ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಸದರಿ ಶಿಬಿರದಲ್ಲಿ ಗ್ರಾಮದ ಜನರಿಗೆ ಬಿಪಿ ಶುಗರ್, ಕ್ಷಯ ತಪಾಷಣೆ ರಕ್ತದ ಹಿಮೋಗ್ಲೋಬಿನ ಇನ್ನಿತರ ರೋಗಗಳ ತಪಾಸಣೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರಯೋಗ ಶಾತ್ರಜ್ಞರಾದ ಯಲ್ಲಮ್ಮ,ಗ್ರಾಮ ಪಂಚಾಯತಿಯ ಮಾಜಿ ಉಪಾಧ್ಯಕ್ಷರಾದ ಅಮರೇಶ ಕಲ್ಮಂಗಿ,ವಲಯ ಮೇಲ್ವಿಚಾರಕ ರಾಯಪ್ಪ,ಆಶಾ ಕಾರ್ಯಕರ್ತೆಯರಾದ ದೇವಮ್ಮ,ಹನುಮಂತಮ್ಮ, ಅಂಗನವಾಡಿ ಕಾರ್ಯಕರ್ತರಾದ ರಂಜಾನ್ ಬೀ,ಶಂಕ್ರಮ್ಮ,ಮಗ್ಗೆಮ್ಮ,ಸುನಿತಾ,ಶಾಲೆಯ ಶಿಕ್ಷಕರಾದ ಹುಸೇನ್ ಸಾಬ್,ದೊಡ್ಡಪ್ಪ,ಛತ್ರಪ್ಪ, ಕಲ್ಲನಗೌಡ,ಕ್ಲಸ್ಟರ್ ಇನ್ ಕರ್ಕ್ ಬಾನೂಬೀ, ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರಾದ ಶಂಕ್ರಪ್ಪ ಹುಲ್ಲೂರು,ಚನ್ನಪ್ಪ,ರಮೇಶ ಉಳ್ಳಿ,ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ