ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಲಕ್ಷ್ಮೇಶ್ವರ ನಗರದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಗರದಲ್ಲಿ ಆಯೋಜಿಸಿದ್ದ “ಆದಿಕವಿ” ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಡಾ.ಚಂದ್ರು ಕೆ.ಲಮಾಣಿ ಯವರು ಭಾಗವಹಿಸಿ,ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ನಮನ ಸಲ್ಲಿಸಿದರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಸಮಾಜದ ಬೆಳವಣಿಗೆಗೆ ಬಹಳಷ್ಟು ಜನರು ತನು-ಮನ ಧನ ಸಹಾಯ ಮಾಡಿ ಎಳೆಮರೆಯ ಕಾಯಿಯಾಗಿ ಕೆಲಸಮಾಡುತ್ತಿದ್ದಾರೆ. ಆದರೆ ವಿಪರ್ಯಾಸವೆಂದರೆ ಸರಕಾರ ಯೋಜನೆಯ ಸಹಾಯ ಪಡೆಯಲು ಅಸಕ್ತರಾಗಿದ್ದಾರೆ ಸಮಾಜಯದಲ್ಲಿ ಯಾರೋ ಒಬ್ಬರು ಮುಂದುವರೆದು ಎಲ್ಲಾ ಸೌಲಭ್ಯ ಪಡೆದು ಇನ್ನುಳಿದವರು ಸೌಲಭ್ಯ ವಂಚಿತರಗುತ್ತಿದ್ದಾರೆ. ನಾನು ಹೇಳುವದೇನೆಂದರೆ ಸಮಾಜದ ಪ್ರತಿಭಾವಂತ ಯುವಕರು ಮನೆಯಲ್ಲಿ ಕುಳಿತರೆ ಅಭಿವೃದ್ಧಿ ಶೂನ್ಯವಾಗುತ್ತದೆ ಕಲಿಕೆಯ ಜೊತೆಗೆ ಮನೆ ಬಿಟ್ಟು ಸಮಾಜದ ಕೆಲಸದಲ್ಲಿ ಭಾಗಿಯಾಗಬೇಕು ಅಂದಾಗ ಸಮಾಜ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು ಹಾಗೂ ಕಾರ್ಯಕ್ರಮವನ್ನು ಉದ್ಘಾಟನೆಯನ್ನು ನೆರವೇರಿಸಿದರು.
ಈ ವೇಳೆಯಲ್ಲಿ ಲಕ್ಷ್ಮೇಶ್ವರ ತಾಲೂಕಿನ ದಂಡಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಅಧ್ಯಕ್ಷರು ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಮಾಜದ ತಾಲೂಕ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಮುಖಂಡರು ಲಕ್ಷ್ಮೇಶ್ವರ ಪುರಸಭೆಯ ಸದಸ್ಯರುಗಳು,ಗ್ರಾಂ.ಪಂ ಅಧ್ಯಕ್ಷರು,ಉಪಾಧ್ಯಕ್ಷರು ಉಪಸ್ಥಿತರಿದ್ದರು.
ವರದಿ-ಸದಾಶಿವ ಭೀಮಪ್ಪ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ