ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಿತ್ತೂರ ಚೆನ್ನಮ್ಮಳ ಆದರ್ಶ ಎಲ್ಲರಿಗೂ ಸ್ಪೂರ್ತಿ-ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ:ಕಿತ್ತೂರು ಚೆನ್ನಮ್ಮಳ ಹೋರಾಟ,ಸಾಹಸ,ಎದೆಗಾರಿಕೆಯ ಜೊತೆಗೆ ಆದರ್ಶ ತತ್ವಗಳು ಪ್ರತಿಯೊಬ್ಬರಿಗೂ ಸ್ಪೂರ್ತಿ ಎಂದು ಯಾದಗಿರಿ ಜಿಲ್ಲಾಧಿಕಾರಿಗಳಾದ ಡಾ: ಸುಶೀಲ ಬಿ.ಹೇಳಿದರು.
ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ,ನಗರಸಭೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ರಾಣಿ ಚೆನ್ನಮ್ಮಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ ರಾಣಿ ಚೆನ್ನಮ್ಮಳ ಹೋರಾಟದ ಇತಿಹಾಸ ರೋಚಕವಾದುದ್ದು.ಸ್ವಾತಂತ್ರ‍್ಯ ಹೋರಾಟಕ್ಕೆ ಮುನ್ನುಡಿ ಬರೆದ ಚೆನ್ನಮ್ಮಳ ಹೋರಾಟದ ಮನೋಭಾವ ಇಂದಿನ ಮಹಿಳೆಯರಿಗೆ ಮಾದರಿಯಾಗಿದೆ ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವುದರೊಂದಿಗೆ ಚೆನ್ನಮ್ಮಳ ಶೌರ್ಯ,ಸಾಹಸ,ಸಾಧನೆಗಳನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಿವೃತ್ತ ಪ್ರಾಚಾರ್ಯರಾದ ವೆಂಕಟರಾವ್ ಕುಲಕರ್ಣಿ ಉಪನ್ಯಾಸ ನೀಡುತ್ತಾ ಮೊಟ್ಟ ಮೊದಲು ಬ್ರಿಟಿಷರ ವಿರುದ್ಧ ಹೋರಾಟದ ಕಿಚ್ಚನ್ನು ಹಚ್ಚಿದ ಸ್ವಾಭಿಮಾನ ಮಹಿಳೆ,ಕಿತ್ತೂರ ಚೆನ್ನಮ್ಮ ಎಂದು ನುಡಿದರು,ಸ್ವಾತಂತ್ರ‍್ಯಕ್ಕಾಗಿ ತಮ್ಮ ಜೀವದ ಹಂಗನ್ನೇ ತೊರೆದು ಹೋರಾಡಿದ,ಧೈರ್ಯ ಸಾಹಸ ನಿಜಕ್ಕೂ ಮೆಚ್ಚುವಂತದ್ದು ಎಂದು ಬಣ್ಣಿಸಿದರು.ಸಮಾರಂಭದ ವೇದಿಕೆಯ ಮೇಲೆ ಸ್ಥಳೀಯ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು,ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷರಾದ ಮಲ್ಲನಗೌಡ ಪಾಟೀಲ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ,ಶಹಪುರ ಘಟಕದ ಅಧ್ಯಕ್ಷರಾದ ದೇವೇಂದ್ರಪ್ಪ ತೋಟಿಗೇರ,ಅಯ್ಯಣ್ಣ ಹುಂಡೇಕರ ಬಸವಂತರಾಯ ಮಾಲಿ ಪಾಟೀಲ್,ಗುರು ಅಂಗಡಿ,ಅನಿಲ್ ಬಿರಾದರ್,ವಿಜಯ ಕುಮಾರ ಹೊನೇಕಲ್,ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು,ಬಸವರಾಜ ಸಿನ್ನೂರು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು,ಬೂದಯ ಹಿರೇಮಠ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮಗಳು ಜರುಗಿದವು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ