ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂಭ್ರಮದ ಕರ್ನಾಟಕ ರಾಜ್ಯೋತ್ಸವ

ಗಂಗಾವತಿ:ತಾಲೂಕಿನ ಹೊಸಕೆರಾ ಕ್ಯಾಂಪಿನ ಅಂಗನವಾಡಿ ಶಾಲೆಯಲ್ಲಿ ಕನ್ನಡಾಂಬೆಯ ರಂಗೋಲಿ ಚಿತ್ರ ಬಿಡಿಸುವುದರೊಂದಿಗೆ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯರು ಜ್ಯೋತಿ ಬೆಳಗಿಸಿ, ಮಕ್ಕಳಿಗೆ ವೇಷ ಭೂಷಣ ಧರಿಸಿ, ಕರ್ನಾಟಕ 50ರ ಸಂಭ್ರಮದ ರಾಜ್ಯೋತ್ಸವವನ್ನು ಪುಟಾಣಿ ಮಕ್ಕಳೊಂದಿಗೆ ಸಂಭ್ರಮದಿಂದ ಆಚರಿಸಿದರು, ನಂತರ ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ಪುಷ್ಪವತಿ ಮಾತನಾಡಿ, ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.[೩] ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ, ಮತ್ತು ವಿಶ್ವದಾ ದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ರಾಜ್ಯದಲ್ಲಿ 68 ಸಾಧಕರಿಗೆ, ಹತ್ತು ಸಂಘ ಸಂಸ್ಥೆಗೆ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುತ್ತದೆ, ಅದರಲ್ಲಿ ನಮ್ಮ ಕೊಪ್ಪಳ ಜಿಲ್ಲೆಯ ಮೂರು ಜನಕ್ಕೆ ಪ್ರಶಸ್ತಿ ಮಡಲಿಗೇರಿದೆ ಎಂದರು, ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿಯರಾದ ಶ್ರೀಮತಿ ಮಾಂತಮ್ಮ. ಪುಷ್ಪಾವತಿ. ಮೋನಿಕಾ. ಶಿವಮ್ಮ. ಸುಜಾತಾ. ನೇತ್ರಾವತಿ. ಮಹಾದೇವಿ ಸಹಾಯಕಿಯರಾದ ಶ್ರೀಮತಿ ಸುಲೋಚನಾ. ಹಾಲಿಂಬಿ. ನಾಗಮ್ಮ. ಖಾಜಮ್ಮ ಭಾಗಿಯಾಗಿ ಪುಟಾಣಿ ಮಕ್ಕಳೊಂದಿಗೆ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಆಚರಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ