ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರ ಸಮಸ್ಯೆ ಬಗೆಹರಿಸದಿದ್ದರೆ ಮುಖ್ಯಮಂತ್ರಿಗಳೇ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ರೈತ ಮುಖಂಡ ಶರಣಗೌಡ ಪೊಲೀಸ್ ಬಿ.ಪಾಟೀಲ್

ಕಲ್ಬುರ್ಗಿ:ರೈತರ ಕೊಳವೆ ಬಾವಿಯ ವಿದ್ಯುತ್ ಸಂಪರ್ಕ ವೆಚ್ಚವನ್ನು ರೈತರೇ ಬರಿಸಬೇಕೆಂಬ ಆದೇಶವನ್ನು ಹಿಂಪಡೆಯಬೇಕು ಹಿಗಾಗಲೇ ಕರ್ನಾಟಕ ರಾಜ್ಯದಲ್ಲಿ ಬರದ ಭವಣೆಯಿಂದ ಸಾಲದ ಸುಳಿಗೆ ಸಿಕ್ಕು ರೈತರು ತತ್ತರಿಸಿ ಹೋಗಿದ್ದಾರೆ ವಿದ್ಯುತ್ ಸಂಪರ್ಕ ವೆಚ್ಚವನ್ನು ರೈತರೆ ಬರಿಸಬೇಕೆಂಬುದು ಇದು ಯಾವ ನ್ಯಾಯ ಕೂಡಲೇ ಸರ್ಕಾರ ಈ ಆದೇಶವನ್ನು ಹಿಂಪಡೆಯಬೇಕು ಒಂದು ವೇಳೆ ಆದೇಶ ಸರ್ಕಾರ ಹಿಂಪಡೆಯದಿದ್ದರೆ ರೈತರು ಬೆಳೆದ ಬೆಳೆ ತರಕಾರಿ ದರ ಹತ್ತು ಪಟ್ಟು ಸರ್ಕಾರ ಹೆಚ್ಚು ಮಾಡಬೇಕಾಗುತ್ತದೆ ಇದಕ್ಕೆ ಸರ್ಕಾರವೇ ನೇರ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ರೈತ ಮುಖಂಡ ಶರಣಗೌಡ ಬಿ ಪೊಲೀಸ್ ಪಾಟೀಲ್ ಮಲ್ಲಾಬಾದ್ ಅವರು ಸರಕಾರದ ವಿರುದ್ಧ ಗುಡುಗಿದ್ದಾರೆ ಅದೇ ರೀತಿಯಾಗಿ ರಾಜ್ಯ ಸರ್ಕಾರದ ಇಂಧನ ಇಲಾಖೆ ಹೊರಡಿಸಿದ ಆದೇಶವನ್ನು ರೈತರ ಪಂಪಸೆಟಗಳಿಗೆ ಹಾಗೂ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ವೆಚ್ಚವನ್ನು ರೈತನೇ ಬರಿಸಬೇಕೆಂಬ ಆದೇಶವನ್ನು ಕೂಡಲೇ ಸರ್ಕಾರ ಹಿಂಪಡೆಯಬೇಕು ಈ ಮುಂಚೆ ಇದ್ದಂತಹ ಆದೇಶವನ್ನು ಮಾಡಬೇಕು ಈಗಾಗಲೇ ರೈತರು ಬರದಿಂದ ಕಷ್ಟಕ್ಕೆ ಸಿಲುಕಿದ್ದಾರೆ ಮುಂಗಾರು ಹಾಗೂ ಹಿಂಗಾರು ಮಳೆಯು ಕೈಕೊಟ್ಟ ಪರಿಣಾಮ ರೈತರು ಬೆಳೆದ ಬೆಳೆಗಳಿಗೆ ನೀರು ಇಲ್ಲದಂತಾಗಿದೆ ಆದಕಾರಣ ರೈತರು ಕೊಳವೆಬಾವಿ ಕೊರೆಸುವುದರ ಮುಖಾಂತರವಾಗಿ ಬೆಳೆಗಳಿಗೆ ನೀರನ್ನು ಒದಗಿಸುತ್ತಿದ್ದಾರೆ ಇದರಿಂದ ರೈತರಿಗೆ ಅಲ್ಪ ಪ್ರಮಾಣದಲ್ಲಿ ಅನುಕೂಲವಾಗಿದೆ ಆದರೆ ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಇಂತಹ ನೀತಿ ಅನುಸರಿಸುವುದು ಸರಿಯಲ್ಲ ಕೂಡಲೇ ಸರ್ಕಾರ ಈ ನೀತಿಯನ್ನು ಹಿಂಪಡೆಯಬೇಕು ಬೇಕಾದರೆ ಸರ್ಕಾರ 200 ಯೂನಿಟ್ ವಿದ್ಯುತ್ ಗ್ಯಾರಂಟಿ ಯೋಜನೆಯನ್ನು ಸರ್ಕಾರ ಕೂಡಲೇ ಹಿಂಪಡಿಯಲ್ಲಿ ಹಾಗೂ ಮಾನ್ಯ ಮುಖ್ಯಮಂತ್ರಿ ಅವರಿಗೆ ಕಷ್ಟವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಕೂಡಲೇ ಸರ್ಕಾರ ಆದೇಶವನ್ನು ಹಿಂಪಡೆಯದಿದ್ದರೆ ಮುಂದಿನ ದಿನಮಾನಗಳಲ್ಲಿ ರಾಜ್ಯದ ಎಲ್ಲಾ ರೈತರೊಂದಿಗೆ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರೈತ ಮುಖಂಡರಾದ ಶರಣಗೌಡ ಬಿ ಪೊಲೀಸ್ ಪಾಟೀಲ್ ಮಲ್ಲಬಾದ್ ಅವರು ಪತ್ರಿಕಾ ಪ್ರಕಟಣೆ ಮೂಲಕ ಸರ್ಕಾರಕ್ಕೆ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ