ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನರು ಮೆಚ್ಚುಗೆಗೆ ಪಾತ್ರರಾದರ:ಸುರಪುರ ಪೋಲಿಸ್ ಅಧಿಕಾರಿಗಳು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ರೈತರ ಪಂಪ್ ಸೆಟ್ ಮೋಟಾರ್ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೋಲಿಸ್ ಇಲಾಖೆ.ಮಂಗಳವಾರ ಸಂಜೆ ನಗರದ ಹೊರವಲಯದ ರುಕ್ಮಾಪುರ ಕ್ರಾಸ್ ಬಳಿ ಬೈಕ್ ಮೇಲೆ ಇಬ್ಬರು ವ್ಯಕ್ತಿಗಳು ಪಂಪಸೆಟ್ ಮೋಟಾರ್ ತೆಗೆದುಕಂಡು ಹೋಗುತ್ತಿರುವದನ್ನು ನೋಡಿದ ಪೆಟ್ರೊಲಿಂಗ್‌ನಲ್ಲಿದ್ದ ಪೊಲೀಸರು,ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ವಿವಿಧ ಕಡೆಗಳಲ್ಲಿ ಮೋಟಾರ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಆರೋಪಿಗಳಿಂದ ಸುಮಾರು 90 ಸಾವಿರ ರೂಪಾಯಿ ಮೌಲ್ಯದ 7 ಪಂಪಸೆಟ್ ಮೋಟಾರ್ ಜಪ್ತಿ ಮಾಡಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ಸುರಪುರ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಜಾವಿದ್ ಇನಾಂದಾರ್,ಮಾರ್ಗದರ್ಶನದಲ್ಲಿ,ಪಿ.ಐ ಆನಂದ ವಾಘಮೊಡೆ,ಪಿ.ಎಸ್.ಕೃಷ್ಣಾ ಸುಬೇದಾರ್,ಹಣಮಂತ್ರಾಯ ಹಾಗೂ ಪೊಲೀಸ್ ಪೇದೆಗಳಾದ ಸಣ್ಣಕೆಪ್ಪ, ನಾಗರಾಜ,ಬಸವರಾಜ,ಹುಸೇನಿ,ಸಿದ್ರಾಮರೆಡ್ಡಿ, ಚಂದ್ರಶೇಖರ ಇವರುಗಳ ತಂಡದ ಕಾರ್ಯಕ್ಕೆ ಎಸ್ಪಿ ಸಂಗೀತಾ ಜಿ ಪ್ರಶಂಸೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ