ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೆಮ್ಮದಿಯ ಜೀವನಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ:ರಾಜು ಬಳಗಾನೂರ

ಸಿಂಧನೂರು ನಗರದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇಂದು 11 ಸಸಿಗಳನ್ನು ನೆಡುವ ಮೂಲಕ ವನಸಿರಿ ಫೌಂಡೇಶನ್ ಮಸ್ಕಅಧ್ಯಕ್ಷರಾದ ರಾಜು ಬಳಗಾನೂರ ಅವರು ತಮ್ಮ ಹುಟ್ಟು ಹಬ್ಬವನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಆಚರಿಸಿಕೊಂಡರು.
ಸಸಿನೆಟ್ಟು ನೀರುಣಿಸಿ ಮಾತನಾಡಿ ಪರಿಸರದ ಸಂರಕ್ಷಣೆ ಎಂಬುದು ನಮ್ಮೆಲ್ಲರ ಜವಾಬ್ದಾರಿ ಮಾತ್ರವಲ್ಲದೆ ಪ್ರತಿಯೊಬ್ಬರ ಹೊಣೆಗಾರಿಕೆಯೂ ಹೌದು.ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಗೆ ವೈಯಕ್ತಿಕವಾಗಿ ನಾವುಗಳು ಹುಟ್ಟು ಹಬ್ಬ ಹಾಗೂ ಇನ್ನಿತರ ಸಮಾರಂಭಗಳಲ್ಲಿ ಸಸಿಗಳನ್ನು ನೆಟ್ಟು ಆಚರಿಸಿಕೊಳ್ಳಬೇಕು.
ನೆಮ್ಮದಿಯ ಜೀವನಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ ಮಾನವ ಪರಿಸರ ಜೀವಿ.ಮನುಷ್ಯ ಬದುಕಲು ಅನಿವಾರ್ಯವಾಗಿರುವ ಮೂಲ ಆವಶ್ಯಕಗಳು ಸಿಗುವುದೇ ಪರಿಸರದಿಂದ ಎನ್ನುವ ಸತ್ಯ ನಮಗೆಲ್ಲಾ ತಿಳಿದೇ ಇದೆ.ನಮ್ಮ ಸುತ್ತಮುತ್ತಲಿನ ಪರಿಸರ ಚೆನ್ನಾಗಿದ್ದರೆ ಮಾತ್ರ ನಾವು ಚೆನ್ನಾಗಿರಲು ಸಾಧ್ಯ ಹಾಗಾಗಿ ನೆಮ್ಮದಿಯ ಹಾಗೂ ಆರೋಗ್ಯಕರ ಬದುಕಿಗೆ ಪರಿಸರವನ್ನು ಸಂರಕ್ಷಿಸುವುದು ಅತ್ಯಂತ ಅಗತ್ಯ.ಇದನ್ನು ಈಗಾಗಲೇ ನಮ್ಮ ವನಸಿರಿ ತಂಡ ಆದಷ್ಟೂ ಸಾರ್ವಜನಿಕರಿಗೆ ತಿಳಿಸುವ ಕಾರ್ಯದಲ್ಲಿ ತೊಡಗಿದೆ ಎಲ್ಲರೂ ವನಸಿರಿ ಫೌಂಡೇಶನ್ ಜೊತೆಗೆ ಕೈಜೋಡಿಸಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಮಸ್ಕಿ ತಾಲೂಕ ಅಧ್ಯಕ್ಷರಾದ ರಾಜು ಬಳಗಾನೂರ,ವಾರ್ಡನ್ ಸುವರ್ಣ,ವನಸಿರಿ ಸದಸ್ಯರಾದ ಶಿವು,ಕಿರಣ ಪತ್ತಾರ,ದೇವರಾಜ ಎಲೆಕೂಡ್ಲಿಗಿ,ಶ್ರೀನಿವಾಸ,ಬಸವರಾಜ ಕಮತಗಿ,ಚನ್ನಪ್ಪ ಕೆ.ಹೊಸಹಳ್ಳಿ ಇನ್ನಿತರರು
ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ