ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ

ಯಾದಗಿರಿ:ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯಾದಗಿರಿ ಜಿಲ್ಲಾ ವಕೀಲರ ಸಂಘ,ಮಹಿಳಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೩ರ ನವೆಂಬರ್ ೯ ಗುರುವಾರ ರಂದು ಯಾದಗಿರಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ರಾಷ್ಟೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಬಿ.ಜಯಂತ ಅವರು ಮಾತನಾಡಿದರು.ದಿನನಿತ್ಯ ನಾವು ಕಾನೂನನ್ನು ಪಾಲಿಸಬೇಕು,ಕಾನೂನು ಅರಿವು ಮತ್ತು ಜ್ಞಾನದಿಂದ ನಾವು ಎಷ್ಟೋ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬಹುದು ಕಾಳಿದಾಸ ಮತ್ತು ಭೋಜರಾನ ಕಥೆಯ ಮೂಲ್ಕಿ ಮಾರ್ಮಿಕವಾಗಿ ಬದುಕಿನ ಬಗ್ಗೆ ತಿಳಿಸಿದರು.
ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ರವೀಂದ್ರ.ಎಲ್.ಹೊನೋಲೆ ಅವರು ಮಾತನಾಡಿದರು.
ರಾಷ್ಟೀಯ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆಯನ್ನು ೯ನೇ ನವೆಂಬರ್ ೧೯೯೫ ರಂದು ಕರ್ನಾಟಕದಲ್ಲಿ ಜಾರಿಗೆ ತಂದಿತು.ಈ ಕಾಯ್ದೆಯ ಪ್ರಕಾರ ಸಮಾಜದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರು ಕಾನೂನು ನೆರವು ಮತ್ತು ಮಾರ್ಗದರ್ಶನವನ್ನು ಉಚಿತವಾಗಿ ಪಡೆಯಬಹುದು ಎಂದು ತಿಳಿಸಿದರು.ಯಾದಗಿರಿ ಜಿಲ್ಲಾ ವಕೀಲರ ಸಂಘ ಅಧ್ಯಕ್ಷರು ಶ್ರೀ ಸಿ.ಎಸ್.ಮಾಲಿ ಪಾಟೀಲ್ ಅವರು ಮಾತನಾಡಿದರು,ರಾಷ್ಟೀಯ ಕಾನೂನು ಸೇವೆಗಳ ದಿನಾಚರಣೆಯು ಸಾಮಾನ್ಯ ನಾಗರಿಕರು ಕೂಡಾ ಸಂವಿಧಾನದ ನೀಡಿದ ತಮ್ಮ ಹಕ್ಕುಗಳನ್ನು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ತಿಳಿದಿರಬೇಕು, ಪ್ರತಿಯೊಬ್ಬರು ಹಕ್ಕುಗಳು ಪಡೆಯಬೇಕು ಅದರಂತೆ ಕರ್ತವ್ಯಗಳನ್ನು ಕೂಡಾ ಪಾಲನೆ ಮಾಡಬೇಕು ಎಂದು ಹೇಳಿದರು.ಯಾದಗಿರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಶ್ರೀ ಡಾ.ಸರ್ವೋದಯ ಎಸ್.ಎಸ್ ಅವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಸ್ಥಾನ ವಹಿಸಿದ ಮಾತನಾಡಿದರು ರಾಷ್ಟೀಯ ಕಾನೂನು ಸೇವೆಗಳ ದಿನಾಚರಣೆಯಲ್ಲಿ ಎಲ್ಲರಿಗೂ ಕಾನೂನಿನ ಮೂಲಕ ದೊರೆಯಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಲು ಕಾನೂನು ಸೇವಾ ಪ್ರಾಧಿಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ವಕೀಲರು,ಶಿಕ್ಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!