ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ವಿಶೇಷ ಪೂಜೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ಶ್ರೀ ಸಿದ್ದು ಮಲ್ಲಿಕಾರ್ಜುನ ಸ್ವಾಮಿ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು ಸಿದ್ದು ಮಲ್ಲಿಕಾರ್ಜುನ ಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ನಡೆದಂತ ಜಾತ್ರಾ ಮಹೋತ್ಸವದಲ್ಲಿ ರಾಜ್ಯದ ನಾನಾ ಮೂಲೆಗಳಿಂದ ಬಂದಂತ ಭಕ್ತಾದಿಗಳು ಸುಮಾರು 3300 ಮೆಟ್ಟಿಲುಗಳ ಏರಿ ಸಿದ್ದು ಮಲ್ಲಿಕಾರ್ಜುನ ಸ್ವಾಮಿ ಮತ್ತು ಭ್ರಮರಾಂಬ ದೇವಿಯ ದರ್ಶನವನ್ನು ಮಾಡಿದರು ಮತ್ತು ಬೆಟ್ಟದ ಮೇಲೆ ಏರಿ ಪ್ರಕೃತಿಯ ಸೌಂದರ್ಯಗಳನ್ನು ಸವಿದು ಭಕ್ತಾದಿಗಳು ದೇವರಲ್ಲಿ ಅವರ ಇಷ್ಟಾರ್ಥವನ್ನು ನೆರವೇರಿಸುವಂತೆ ಕೇಳಿಕೊಂಡರು.ಇಲ್ಲಿಗೆ ಬರುವಂತ ಭಕ್ತಾದಿಗಳು ಮಾತನಾಡಿ ಬೆಟ್ಟ ಮೇಲೆ ಶಿಥಿಲಗೊಂಡಿದ್ದು ಬರುವುದಕ್ಕೆ ಭಯವಾಗುತ್ತದೆ ಎಂದರು ಕುಡಿಯಲು ನೀರು ಹಾಗೂ ಮೂಲಭೂತ ಸೌಲಭ್ಯಗಳನ್ನು ಮಾಡಬೇಕೆಂದು ತಿಳಿಸಿ ಅದು ಅಲ್ಲದೆ ಅಲ್ಲಿರುವ ವ್ಯಾಪಾರಸ್ಥರಿಗೆ ಯಾವುದೇ ಅನುಕೂಲವಿಲ್ಲ ಅಲ್ಲಿ ತಿಂದಂತಹ ಪ್ಲಾಸ್ಟಿಕ್ ಕವರ್ ನೀರಿನ ಬಾಟಲ್ ಗಳಿಂದ ಬೆಟ್ಟವು ಅನೈರ್ಮಲ್ಯಗೊಂಡು ಬೆಟ್ಟದ ಸೌಂದರ್ಯ ಹಾಳಾಗುತ್ತದೆ ಎಂದು ತಿಳಿಸಿದರು ಮತ್ತು ಬರುವಂತಹ ಭಕ್ತಾದಿಗಳು ಅವರ ಅನಿಸಿಕೆಗಳನ್ನು ನಮ್ಮ ವರದಿಗಾರರಿಗೆ ತಿಳಿಸಿದರು.
ವರದಿ-ಆರ್ ಶಂಕರ್,ಹಂಡಿತವಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ