ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯೋತ್ಸವ ಪ್ರಶಸ್ತಿಗೆ ಕಳಂಕ ತಂದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ತೇಜಸ್ವಿ ಆಗ್ರಹ

ಮೈಸೂರು:ನವೆಂಬರ್ ೧ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಜಿಲ್ಲಾಡಾಳಿತ ವತಿಯಿಂದ ಸನ್ಮಾನಿಸುವುದು ಸರಿ,ಆದರೆ ಈ‌ ಬಾರಿ ಅನರ್ಹರನ್ನು ಆಯ್ಕೆ ಮಾಡಿ ಕಳಂಕ ತರಲಾಗಿದೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ.
2023ರ ನವೆಂಬರ್ ನಲ್ಲಿ ಸಾಧಕರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸುದರ್ಶನ್ ರವರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಅವರು ದೂರಿದ್ದಾರೆ.
ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವ ಮೂಲಕ ರಾಜ್ಯೋತ್ಸವ ಪ್ರಶಸ್ತಿಗೆ ಕಳಂಕ ತಂದಿರುವ ಸುದರ್ಶನ್ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುದರ್ಶನ್ ರವರು ಸಾಧಕರ ಪೂರ್ವ,ಪರ ಮತ್ತು ಅವರ ಸಾಧನೆಗಳನ್ನು ಗುರುತಿಸದೆ ಕಾಟಾಚಾರಕ್ಕೆ ಪ್ರಶಸ್ತಿ ನೀಡುವ ಮೂಲಕ ಮೈಸೂರು ಜಿಲ್ಲೆಗೆ ಕಳಂಕ ತಂದಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಯಾವ ಮಾನ ದಂಡದ ಮೇಲೆ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರಶಸ್ತಿ ನೀಡಿದ್ದಾರೆ ಎಂದು ಬಹಿರಂಗವಾಗಿ ತಿಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸುದರ್ಶನ್ ಅವರನ್ನು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಈ ಲೋಪವನ್ನು ಗಂಭೀರವಾಗಿ ಪರಿಗಣಿಸಿ ಸುದರ್ಶನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ