ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಳೆ ಜಿಲ್ಲಾಸ್ಪತ್ರೆಗೆ ರಾಜ್ಯ ಮಕ್ಕಳ ಆಯೋಗದ ಸದಸ್ಯರ ಭೇಟಿ

ನವಜಾತ ಶಿಶು,ತಾಯಂದಿರ ಕಂಡು ಆಸ್ಪತ್ರೆಯಲ್ಲಿ ಸೂಕ್ತ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಯಾದಗಿರಿ ಹಳೆ ಜಿಲ್ಲಾಸ್ಪತ್ರೆಗೆ ರಾಜ್ಯ ಮಕ್ಕಳ ಆಯೋಗದ ಸದಸ್ಯರಾದ ಶ್ರೀ ಶಶಿಧರ್ ಕೋಸುಂಬೆ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ತಿಂಗಳಿಗೆ 700-800 ಹೆರಿಗೆ ದಾಖಲಾಗುತ್ತಿದ್ದು, ನವಜಾತ ಶಿಶುವಿನ ತೀವ್ರ ನಿಗಾ ಘಟಕದಲ್ಲಿ ಕೇವಲ 4 ವಾರ್ಮರ್,2 ಫೋಟೋ ಥೆರಪಿ ವ್ಯವಸ್ಥೆ ಇದೆ. ಒಂದೇ ವಾರ್ಮರ್ ನಲ್ಲಿ ಎರಡು ಮಕ್ಕಳಿಗೆ ವೈದ್ಯಕೀಯ ಉಪಚಾರ ಮಾಡುವುದರಿಂದ ಮಕ್ಕಳಿಗೆ ಕಾಯಿಲೆ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಆಸ್ಪತ್ರೆಯ ವೈದ್ಯರಿಗೆ ತಿಳಿಸಿ ಸೂಕ್ತ ವ್ಯವಸ್ಥೆ ಒದಗಿಸಲು ಸೂಚಿಸಿದರು.
ಆಸ್ಪತ್ರೆಯಲ್ಲಿ ಶೌಚಾಲಯಗಳು ಸ್ವಚ್ಛವಿಲ್ಲ, ನವಜಾತ ಶಿಶುವಿನ ತೀವ್ರ ನಿಗಾ ಘಟಕದಲ್ಲಿ ಸಿಸಿ ಕ್ಯಾಮರಾವಿಲ್ಲ,ವೈದ್ಯರು ಮತ್ತು ಸಿಬ್ಬಂದಿಗಳು ಸರಿಯಾಗಿ ಹಾಜರಾಗುತ್ತಿಲ್ಲ,ಬಾಣಂತಿಯರಿಗೆ ಬಿಸಿ ನೀರಿನ ವ್ಯವಸ್ಥೆ ಇಲ್ಲ,ಪೌಷ್ಠಿಕ ಆಹಾರ ನೀಡುತ್ತಿಲ್ಲ, ಸರಿಯಾದ ದಾಖಲಾತಿಯಿಲ್ಲ,ಹಣ್ಣು ತರಕಾರಿ ಮತ್ತು ಧಾನ್ಯಗಳು ಇಲ್ಲದೆ ಸಮಸ್ಯೆಗಳಿಂದ ಕೂಡಿದೆ.ಕಾರಣ ಈ ಕುರಿತು ಸೂಕ್ತ ನಿಗಾ ಇಡಲು ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚಿಸಿದರು.

ಫೋಟೋ ಥೆರಪಿ ಹತ್ತಿರದ ವಿದ್ಯುತ್ ಸ್ವಿಚ್ ಹಾಳಾಗಿ ಶಾರ್ಟ್ ಸರ್ಕ್ಯೂಟ್ ಆಗುವ ಸಂಭವವಿದೆ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದ ಅವರು,ಮಕ್ಕಳಿಗೆ ಸಮಸ್ಯೆಗಳಾದರೆ ಹೊಣೆ ಯಾರು ಎಂದರು.
ವರದಿ:ಶಿವರಾಜ ಸಾಹುಕಾರ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ