ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಿ.01 ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಕುಷ್ಟಗಿಯಲ್ಲಿ ಜನತಾ ದರ್ಶನ

ಕೊಪ್ಪಳ:ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ,ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡಂತೆ ಶಿಷ್ಠಾಚಾರಕ್ಕೆ ಅನುಗುಣವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರ ನೇತೃತ್ವದಲ್ಲಿ ಡಿಸೆಂಬರ್ 01 ರಂದು ಕುಷ್ಟಗಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಸಭಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05.30 ರವರೆಗೆ ಸಚಿವರು ಜನತಾ ದರ್ಶನ ನಡೆಸಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತದೆ. ಆದ್ದರಿಂದ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವಂತೆ ಹಾಗೂ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು.
ಜಿಲ್ಲಾಡಳಿತದಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರಿಗೆ ಅದರ ಫಲಿತಾಂಶವನ್ನು ಒದಗಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕೋಶ/ವಿಭಾಗದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಡಿ.01 ರಂದು ಜನತಾ ದರ್ಶನ ಕಾರ್ಯಕ್ರಮಕ್ಕೆ ತಪ್ಪದೇ ಹಾಜರಾಗತಕ್ಕದ್ದು ಒಂದು ವೇಳೆ ಗೈರು ಹಾಜರಾದಲ್ಲಿ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ