ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆಟವಾಡುತ್ತಿದ್ದ 8 ವರ್ಷದ ಮಗುವಿನ ಮೇಲೆ ಬಿದ್ದ ಗೇಟ್:ತಲೆಗೆ ತೀವ್ರ ಗಾಯ

ಭದ್ರಾವತಿ:ನಗರದ ಮಿಲಿಟರಿ ಕ್ಯಾಂಪ್ ಪೊಲೀಸ್ ವಸತಿ ಗೃಹದ ಮುಖ್ಯ ದ್ವಾರದ ದೊಡ್ಡ ಗೇಟ್ ಮುರಿದು ಪಕ್ಕದಲ್ಲೇ ಆಟವಾಡುತ್ತಿದ್ದ ಪೊಲೀಸ್ ಸಿಬ್ಬಂದಿಯವರ ಮಕ್ಕಳ ಮೇಲೆ ಬಿದ್ದಿದ್ದು ಮುಖ್ಯ ಪೇದೆಯೊಬ್ಬರ 8 ವರ್ಷದ ಮಗುವಿನ ತಲೆಗೆ ತೀವ್ರತರವಾದ ಪೆಟ್ಟುಬಿದ್ದಿರುವ ಆತಂಕಕಾರಿ ಘಟನೆ ಶನಿವಾರ ಸಂಜೆ ನಡೆದಿದೆ.
ಪೊಲೀಸ್ ಹೆಡ್ ಕಾನ್ಸ್ಟೇಬಲ್ ಎಂ ಸಿ ರೂಪೇಶ್ ರವರ 8 ವರ್ಷದ ಮಗನ ಮೇಲೆ ದೊಡ್ಡ ಗೇಟ್ ಬಿದ್ದಿದ್ದರಿಂದ ಬಾಲಕನ ತಲೆಗೆ ಭಲವಾದ ಪೆಟ್ಟು ಬಿದ್ದಿದ್ದು ಅತಿಯಾದ ರಕ್ತಸ್ರಾವ ಆಗುತ್ತಿದ್ದ ಮಗುವನ್ನು ತಕ್ಷಣ ಹತ್ತಿರದಲ್ಲೇ ಇದ್ದ 112 ವಾಹನದಲ್ಲಿ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಕರೆದೋಯ್ಯಲಾಯಿತು.ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಖ್ಯದ್ವಾರದ ಗೇಟ್ ಕಳಪೆ ಕಾಮಗಾರಿಯೇ ಈ ಅವಘಡಕ್ಕೆ ಕಾರಣ ಎಂದು ಪೊಲೀಸ್ ಸಿಬ್ಬಂದಿಯವರು ಬೇಸರ ವ್ಯಕ್ತಪಡಿಸಿದ್ದಾರೆ ಕಳಪೆ ಕೆಲಸ ಮಾಡಿದವರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ತಮ್ಮ ಮಕ್ಕಳ ಬಗ್ಗೆ,ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಈ ಹಿಂದೆ ಇದೇ ಪೋಲಿಸ್ ವಸತಿ ಗೃಹ ನಿರ್ಮಾಣ ವಿಳಂಬವಾಗುತ್ತಿರುವ ಕಾಮಗಾರಿ ಕುರಿತು ಪೊಲೀಸರು ಅಸಮಾಧಾನ ಹೊರ ಹಾಕಿದ್ದರು. ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ