ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

23 ದಿನಗಳಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ಕಾರ್ಯವು
ಶ್ರೀ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು 23 ದಿನಗಳಲ್ಲಿ ಒಟ್ಟು 2 ಕೋಟಿ ರೂಪಾಯಿ ಸಂಗ್ರಹವಾಗಿದೆ. ಶುಕ್ರವಾರ ನಡೆದ ಹುಂಡಿ ಹಣ ಎಣಿಕೆ ಮಾಡಲಾಯಿತು 23 ದಿನಗಳ ಅವಧಿಯಲ್ಲಿ 2 ಕೋಟಿ ರೂ.ಸಂಗ್ರಹವಾಗಿದೆ ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆದಿದ್ದು,ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಸಂಗ್ರಹವಾಗಿದೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಭೇಟಿ ನೀಡಿದ್ದಾರೆ ಜೊತೆಗೆ ಹುಣ್ಣಿಮೆ,ಅಮಾವಾಸ್ಯೆ, ಸರ್ಕಾರಿ ರಜೆ ದಿನಗಳು,ದೀಪಾವಳಿ,ಜಾತ್ರಾ ಮಹೋತ್ಸವ,ಕಾರ್ತಿಕ ಸೋಮವಾರ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ,ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,00,41,724 ರೂ. ಸಂಗ್ರಹವಾಗಿದೆ ಕಳೆದ ತಿಂಗಳು ಚಿನ್ನದ ಮೌಲ್ಯಮಾಪಕರಿಗೆ ಅನಾರೋಗ್ಯ ಇದ್ದ ಹಿನ್ನೆಲೆ ಈ ಬಾರಿ ಮೌಲ್ಯಮಾಪನ ಮಾಡಲಾಗಿದೆ ಕಳೆದ ತಿಂಗಳು ಚಿನ್ನ 24 ಗ್ರಾಂ,ಬೆಳ್ಳಿ ಒಂದು ಕೆಜಿ 915 ಗ್ರಾಂ ಸಂಗ್ರಹವಾಗಿದೆ ಈ ಬಾರಿ ಚಿನ್ನ 76 ಗ್ರಾಂ ಮತ್ತು ಬೆಳ್ಳಿ 1 ಕೆಜಿ 514 ಗ್ರಾಂ ಸಂಗ್ರಹವಾಗಿದೆ. ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಈ ಹಿಂದೆ,₹2 ಕೋಟಿಗೂ ಹೆಚ್ಚು ಹಣ ಸಂಗ್ರಹ:ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಕಳೆದ ನವೆಂಬರ್​ನಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು ನವೆಂಬರ್​ನ 28 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ 2.10 ಕೋಟಿ ರೂ.ಸಂಗ್ರಹವಾಗಿತ್ತು. ಬೆಟ್ಟದ ಬಸ್ ನಿಲ್ದಾಣ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿತ್ತು.ಹುಂಡಿಗಳ ಎಣಿಕೆಯಲ್ಲಿ 2,10,78,014 ರೂಪಾಯಿ ಸಂಗ್ರಹ ಆಗಿತ್ತು ಪ್ರಾಧಿಕಾರದ ವತಿಯಿಂದ ಭಕ್ತಾದಿಗಳಿಗೆ ಎಷ್ಟೇ ಅರಿವು ಮೂಡಿಸಿದರೂ ಸಹ ಚಲಾವಣೆಯಲ್ಲಿಲ್ಲದ ಎರಡು ಸಾವಿರ ಮುಖಬೆಲೆಯ 32 ನೋಟುಗಳು ಹುಂಡಿಯಲ್ಲಿ ದೊರೆತಿದ್ದವು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ