ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೆದ್ದಾರಿ ರಸ್ತೆಗಳು ಹಾಳಾಗಿವೆ:ಜಯ ಕರ್ನಾಟಕ ರಕ್ಷಣಾ ಸೇನೆ ಆಕ್ರೋಶ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗರಸಭೆ ವ್ಯಾಪ್ತಿಯಲ್ಲಿ ಬರುವ ಬೀದರ್-ಶ್ರೀರಂಗಪಟ್ಟಣಕ್ಕೆ ಹಾದು ಹೋಗುವ ರಾಜ್ಯ ಹೆದ್ದಾರಿ ಶ್ರೀ ಶರಣಬಸಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜನಿಂದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದ ಮಾರ್ಗವಾಗಿ ಸುರಪುರ ಹೊರ ವಲಯದಿಂದ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆಯ ಅಕ್ಕ ಪಕ್ಕದಲ್ಲಿ ಹೈಮಾಸ್ಟ್ ದೀಪಗಳು ರೋಡ್ ಬ್ರೇಕ್ ಗಳು ಹಾಗೂ ಜನ ಸಾಮಾನ್ಯರಿಗೆ ತೊಂದರೆ ಆಗದಂತೆ ತಡೆಗೋಡೆ ನಿರ್ಮಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ತಾಲೂಕ ದಂಡಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಿ ಮನವಿ ಪತ್ರವನ್ನು ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ಮುಖಂಡರು ಮಾತನಾಡಿದರು ಈ ಒಂದು ರಸ್ತೆಯಲ್ಲಿ ಭಾರೀ ವಾಹನಗಳು,ಕಾರುಗಳು, ಟ್ರ್ಯಾಕ್ಟರ್,ಎತ್ತಿನ ಬಂಡಿಗಳು,ಹೆದ್ದಾರಿ ಮೇಲೆ ತಿರುಗಾಡುತ್ತಿದ್ದು ತುಂಬಾ ಜನ ಸಾಂದ್ರತೆಯುಳ್ಳ ರಸ್ತೆಯಾಗಿದ್ದು ರಾಜ್ಯ ಹೆದ್ದಾರಿ ಹೊಂದಿಕೊಂಡು ಶ್ರೀ ಶರಣಬಸಪ್ಪ ಅಪ್ಪ ನಿಷ್ಠಿ ಕಾಲೇಜು,ಬಸ್ ಡಿಪೋ, ಅಗ್ನಿ ಶಾಮಕ ಠಾಣೆ,ಅಂಗಡಿ ಮುಗ್ಗಟ್ಟಗಳು,ವಸತಿ ಗೃಹಳು ಹಾಗೂ ಲಾಡ್ಜ್ ಗಳಿದ್ದು ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವೇಗವಾಗಿ ಚಲಿಸುವುದರಿಂದ ಸಾಕಷ್ಟು ಅಪಘಾತ ಸಂಭವಿಸುತ್ತಿರುವುದು ಬಹಳಷ್ಟು ಉದಾಹರಣೆಗಳಿವೆ ಎಂದು ಪ್ರತಿಭಟನಕಾರರು ಹೇಳಿದರು.ಕೆಲವು ದಿನಗಳ ಹಿಂದೆ ನಮ್ಮ ಕರ್ನಾಟಕ ರಕ್ಷಣಾ ಸೇನೆ ತಾಲೂಕು ಅಧ್ಯಕ್ಷ ಮಲ್ಲಪ್ಪ ಕಬಾಡಗೇರಾ ನೇತೃತ್ವದಲ್ಲಿ ನಗರದ ನಗರಸಭೆ ಮುಂಭಾಗದಲ್ಲಿ ಪ್ರತಿಭಟನೆ ಮಾಡಿ ಮನವಿ ಪತ್ರವನ್ನು ಸಲ್ಲಿಸಿದರು ಯಾವ ಒಬ್ಬ ಅಧಿಕಾರಿಗಳು ಕೂಡಾ ಸ್ಪಂದಿಸುತ್ತಿಲ್ಲ ಇಂತಹ ನಾಲಾಯಕ್ ಅಧಿಕಾರಿಗಳಿಗೆ ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.ಸುರಪುರ ನಗರದ ಹೊರವಲಯದ ರೈತರು ಮೃತ್ಯುವಿಗೆ ಆವಾಹನ ನೀಡುತ್ತದೆ ಮುಂದಿನ ದಿನಗಳಲ್ಲಿ ಜನ ಸಾಮಾನ್ಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ಮುಖಂಡರಾದ ಶಿವುರಾಜ್ ವಗ್ಗರ್, ಶರಣಪ್ಪ ಭೈರಿಮಡ್ಡಿ,ಮಲ್ಲಪ್ಪ ಕಬಾಡಗೇರಾ, ತಾಲೂಕು ಅಧ್ಯಕ್ಷ ,ರಾಜು ದರಬಾರಿ,ಕೃಷ್ಣಾ ಹಾವಿನ್,ರಾಜು ಹುಂಡೇಕಲ್,ತಿಪ್ಪಣ್ಣ ಖಾನಿಕೇರಾ, ರವಿ ಬಿಚ್ಚತ್ತಿಕೇರಾ,ರಾಘವೇಂದ್ರ ಗೋಗಿಕೇರಾ,ಧನರಾಜ್ ರಾಠೋಡ,ರಮೇಶ್ ಓಕುಳಿ,ರಮೇಶ ಭಂಡಾರಿ ಸೇರಿದಂತೆ ಅನೇಕ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ