ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಷ್ಣು ಸೇನಾ ಸಮಿತಿ ಸುರಪುರ ತಾಲೂಕು ಪದಾಧಿಕಾರಿಗಳ ಪೂರ್ವಭಾವಿ ಸಭೆ

ಯಾದಗಿರಿ ಜಿಲ್ಲೆಯ ಸುರಪುರ ನಗರದ ವೀರೇಶೈವ ಕಲ್ಯಾಣ ಮಂಟಪದಲ್ಲಿ ಇಂದು ವಿಷ್ಣು ಸೇನಾ ಸಮಿತಿಯ ಸುರಪುರ ತಾಲೂಕು ಅಧ್ಯಕ್ಷ ಮಲ್ಲು ವಿಷ್ಣು ಸೇನಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು.
ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಲ್ಲು ವಿಷ್ಣು ಸೇನಾ ಅವರು ಮಾತನಾಡುತ್ತಾ ಇದೇ ತಿಂಗಳು 17 ನೇ ತಾರೀಖಿನಂದು ಬೆಂಗಳೂರು ನಗರದಲ್ಲಿ ದಿವಂಗತ ಡಾ.ವಿಷ್ಣುವರ್ಧನ್ ಅಪ್ಪಾಜೀ ಅವರ ಪುಣ್ಯ ಭೂಮಿ ಉಳಿವಿಗಾಗಿ ವೀರಕಪುತ್ರ ಶ್ರೀನಿವಾಸ ಡಾ.ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷರು ಇವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಕೊಳ್ಳಲಾಗಿದ್ದು.
ಈ ಒಂದು ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿಷ್ಣು ಅಪ್ಪಾಜೀಯವರ ಅಭಿಮಾನಿಗಳು ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡು ಬೆಂಗಳೂರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಪ್ರಾರಂಭವಾದ ಪ್ರತಿಭಟನೆ ಜಾಥಾ ಫ್ರೀಡಂ ಪಾರ್ಕ್ ವರೆಗು ಹೊರಡುವದು ಎಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ಮಲ್ಲು ವಿಷ್ಣು ಸೇನಾ ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಷ್ಣು ಸೇನಾ ಸಮಿತಿಯ ಪದಾಧಿಕಾರಿಗಳಾದ ಶಿವಕುಮಾರ್,ರಾಮಕೃಷ್ಣ, ಸಂದೀಪ್ ಪಾಟೀಲ್,ನಿಂಗಣ್ಣ ಕೆ ದೇವ್,ಗೋಪಾಲ್ ಗೌಡಪ್ಪ,ತಿಮ್ಮಯ್ಯ,ಸಂತೋಷ, ದೇವು,ಮರಿಯಪ್ಪ,ಸಾಗರ್, ಮುಬಾರಕ್,ಮಲ್ಲು,ನಾಗರಾಜ್,ಕಿಟ್ಟಿ,ಮೌನೇಶ, ಖಾಜಾ ಹುಸೇನ್‌ ಇತರರು ಉಪಸ್ಥಿತರಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ