ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಸ್ ಸೌಕರ್ಯ ಕಲ್ಪಿಸಲು ವಿದ್ಯಾರ್ಥಿಗಳಿಂದ 7 ಕೀಮಿ ಪಾದಯಾತ್ರೆ ಮುಖಾಂತರ ಪ್ರತಿಭಟನೆ

ಇಂಡಿ:ಹಂಜಗಿ ಗ್ರಾಮದ ಸುಮಾರು 200 ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸುಮಾರು 7 ಕೀಮಿ ಪಾದಯಾತ್ರೆ ಮೂಲಕ ಇಂಡಿ ಕೆ.ಎಸ್.ಆರ್.ಟಿ.ಡಿಪೋ ಮುಂದೆ 1 ಘಂಟೆಕಾಲ ಮುಷ್ಕರ ಮಾಡಿ ಘಟಕ ವ್ಯಪಸ್ಥಕರಿಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾ ಸ್ಥಳಕ್ಕೆ ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲರು ಬೆಟ್ಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ನಂತರ ಮಾತನಾಡುತ್ತಾ ಹಂಜಗಿ ನಿಂಬಾಳ ಕೋಳೂರಗಿ ಮಾರ್ಗದ ಬಸ್ ಸರಿಯಾದ ಸಮಯಕ್ಕೆ ಬರದು ತೊಂದರೆ ಅನುಭವಿಸುವಂತಾಗಿದೆ.ಅಷ್ಟೆಯಲ್ಲ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಇಂತಹ ಸಮಸ್ಯೆಗಳು ಇದ್ದು,ಈ ವಿಚಾರವಾಗಿ ಹಲವಾರು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಾ ಕಾಲಹರಣ ಮಾಡುವಂತಾಗಿದೆ ಎರಡು ಮೂರು ತಿಂಗಳಲ್ಲಿ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದು ಇಂತಹ ಸಮಯದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತೊಂದರೆ ಆದರೆ ಯಾರು ಜವಾಬ್ದಾರರು ಕಾರಣ ಮಕ್ಕಳ ಭವಿಷ್ಯ ದೃಷ್ಟಿಯಿಂದ ತಾಲೂಕೀನ ಪ್ರತಿ ವಿದ್ಯಾರ್ಥಿಗೆ ಅನಾನುಕೂಲವಾದರೆ,ಮುಂದಿನ ಕೆಲವೆ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಇದೆ ಸಂದರ್ಭದಲ್ಲಿ ಎಮ್ ಕೆ ಶೇಖ್, ರಮೇಶ ರಾಠೋಡ,ಇಸ್ಮಾಯಿಲ್ ಕುಣಬಿ, ರಿಯಾಜ್ ಪಾಂಡು,ಮಾಳಪ್ಪ ಪೂಜಾರಿ,ಕಿಶೀಮ ವಾಲಿಕಾರ,ವಿನೋದ್ ಕಾಳೆ,ನಿಂಗಪ್ಪ ಹಿರೇಕುರಬರ ಮುಂತಾದ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವರದಿ:ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ