ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರಪತ್ರಗಳು ಹಾಗೂ ಪುಸ್ತಕಗಳ ವಿತರಣೆ ಮಾಡುವ ಮೂಲಕ ಮಾನವ ಹಕ್ಕುಗಳ ಪ್ರತಿಜ್ಞಾ ದಿನಾಚರಣೆ

ಕೊಟ್ಟೂರು:ಮಾನ್ಯ ಜಿಲ್ಲಾಧಿಕಾರಿಗಳ ಅದೇಶದನ್ವಯ ಪಟ್ಟಣದ ಹಳೇ ಪಟ್ಟಣ ಪಂಚಾಯಿತಿ ಕಛೇರಿಯಲ್ಲಿ ಹಾಗೂ ಶ್ರೀ ಗುರು ಕೊಟ್ಟೂರೇಶ್ವರ ದೇವಾಲಯದ ಮುಂಭಾಗದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಎ.ನಸ್ಸರುಲ್ಲಾ ನೇತ್ರತ್ವದಲ್ಲಿ ಸಾರ್ವಜನಿಕರಿಗೆ ಕಿರು ಪುಸ್ತಕಗಳು ಹಾಗೂ ಕರಪತ್ರಗಳನ್ನು ವಿತರಣೆ ಮಾಡುವುದರ ಮೂಲಕ ಮಾನವ ಹಕ್ಕುಗಳ ದ ಪ್ರತಿಜ್ಞಾ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ನಸ್ಸರುಲ್ಲಾ ರವರು ಮಾತನಾಡಿ ಮಾನವ ಹಕ್ಕುಗಳು ಎಂದರೆ ಮನುಷ್ಯ ಬದುಕಿಗಾಗಿ ಇರುವ ಮನುಷ್ಯನ ಅಸ್ತಿತ್ವಕ್ಕಾಗಿ ಇರುವ ಹಕ್ಕುಗಳು 1948 ರಲ್ಲಿ ವಿಶ್ವ ಸಂಸ್ಥೆಯ ಸಾಮನ್ಯ ಸಭೆಯಲ್ಲಿ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು ಅನುಮೋದಿಸಲಾಯಿತು.
ಈ ದಿನದ ನೆನಪಿಗಾಗಿ ಪ್ರತಿವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನು ಅಚರಿಸಲಾಗತ್ತದೆ.
ಈ ಮಹತ್ವದ ದಿನದಂದು ರಾಷ್ಟೀಯತೆ,ಜನಾಂಗೀಯತೆ,ಧರ್ಮ ಮತ್ತು ಇನ್ನಾವುದೇ ವ್ಯತ್ಯಾಸವನ್ನು ಲೆಕ್ಕಿಸದೆ ಪ್ರತಿಯೊಬ್ಬ ಮನುಷ್ಯನಿಗೂ ಅರ್ಹವಾಗಿರುವ ಮೂಲಭೂತ ಸ್ವಾತಂತ್ರ್ಯ ಗಳು ಮತ್ತು ಹಕ್ಕುಗಳ ಕುರಿತು ಜಗತ್ತು ನೆನಪಿಸುತ್ತದೆ.ಈ ದಿನದಂದು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳಿಗಾಗಿ ಹೋರಾಡಿದ ಎಲ್ಲಾ ಪ್ರಮುಖರನ್ನು ನೆನಪಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಅನುಷಾ ಮೇಡಂ ಅರೋಗ್ಯ ಕಿರಿಯ ನೀರಿಕ್ಷಕರು,ಎಸ್.ಕೊಟ್ರಪ್ಪ ಕಂದಾಯ ನಿರೀಕ್ಷಕರು,ಅಗಡಿ ಮಂಜುನಾಥ,ಚೆನ್ನಬಸಪ್ಪ, ಮುತ್ತುರಾಜ್,ಮಾದೂರು ಕೊಟ್ರೇಶ,ಚಿಗಟೇರಿ ಪ್ರಕಾಶ್ ಹಾಗೂ ಪೌರಕಾರ್ಮಿಕರು ಸಾರ್ವಜನಿಕರು ಇದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ