ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಕ ವೃತ್ತಿ ತೃಪ್ತಿ ತಂದಿದೆ:ಅನಿತಾ ಢಗೆ

ಯಾದಗಿರಿ:ಮಗುವಿನ ಸರ್ವಾಂಗೀಣ ವ್ಯಕ್ತಿತ್ವ ವಿಕಾಸನಕ್ಕೆ ಶಿಕ್ಷಣ ಪೂರಕವಾಗಿದೆ,ಅಲ್ಲದೆ
ಬೋಧನೆಯಲ್ಲಿ ಸಿಗುವ ಸಂತೋಷ,ಖುಷಿ, ನೆಮ್ಮದಿ,ಬೇರೆಲ್ಲೂ ಇಲ್ಲ ಆದ್ದರಿಂದ ಶಿಕ್ಷಕ ವೃತ್ತಿ ನನಗೆ ಸಂಪೂರ್ಣವಾಗಿ ತೃಪ್ತಿ ತಂದಿದೆ ಎಂದು ನಿವೃತ್ತ ಶಿಕ್ಷಕಿ ಅನಿತಾ ಢಗೆ ಹೇಳಿದರು.
ಶಹಾಪುರ ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲಾ ಶಿಕ್ಷಕಿಯಾದ ಅನಿತಾ ಢಗೆ ಅವರ ವಯೋನಿವೃತ್ತಿ ಆಯೋಜಿಸಿದ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ಈ ಗ್ರಾಮದಲ್ಲಿ ಸುಮಾರು 25 ವರ್ಷಗಳಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದೇನೆ ಇಲ್ಲಿಯ ಜನರ ಪ್ರೀತಿ-ವಿಶ್ವಾಸಕ್ಕೆ ನಾನೆಂದು ಚಿರಋಣಿಯಾಗಿರುತ್ತೇನೆ ಎಂದು ನುಡಿದರು.
ಒಬ್ಬ ಸಾಮಾನ್ಯ ವ್ಯಕ್ತಿಯನ್ನು ದೇಶದ ಸತ್ಪ್ರಜೆಯನ್ನಾಗಿ ಮಾಡುವ ಶಕ್ತಿ ಕೇವಲ ಗುರುವಿನಲ್ಲಿದೆ,ಕಲಿಸಿದ ಗುರುಗಳಿಗೆ ಗೌರವ ಸಮರ್ಪಿಸುವುದರಿಂದ ಧನ್ಯತಾಭಾವ ಪ್ರಾಪ್ತಿ ಯಾಗುವುದೆಂದರು,ಇಂಥ ಖುಷಿಗೆ ಮತ್ತೇನು ಬೇಕಿಲ್ಲ ಎಂದು ಭಾವುಕತೆಗೆ ಒಳಗಾದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಂತೋಷ ಗೌಡ ಸುಬೇದಾರ,ಚೆನ್ನಪ್ಪ ಜಾಯಿ,ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶಂಕರ ಪಡಶೆಟ್ಟಿ,ದತ್ತು ಕೈನೂರ,ಗುರು ಪತ್ತಾರ್,ಆನಂದ್ ಗೊರವಾಯಿ ಹಾಗೂ ಇನ್ನಿತರ ಶಿಕ್ಷಕರ ಬಳಗವದವರು ಉಪಸ್ಥಿತರಿದ್ದರು.

ವರದಿ-ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ