ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ-ಶಂಕರ್ ಶೇಟ್

ಸೊರಬ:ದೈಹಿಕ ಸದೃಡತೆಯು ಜೀವನದ ಒಂದು ಮಾರ್ಗವಾಗಿದೆ.ಕ್ರೀಡೆಗಳಲ್ಲಿ ತೊಡಗುವುದರಿಂದ ದೈಹಿಕ ಸದೃತೆ ಮಾತ್ರವಲ್ಲದೇ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ,ಸಮಾಜ ಸೇವಕ ಶಂಕರ್ ಶೇಟ್ ಅಭಿಪ್ರಾಯಪಟ್ಟರು.
ಸೊರಬ ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಬಿಸಿಸಿ ಕಾನುಕೊಪ್ಪ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿದ್ಯುತ್ ನಗರ ಪ್ರೀಮಿಯರ್ ಲೀಗ್ 3ನೇ ವರ್ಷದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡೆಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದು,ಮನುಷ್ಯನು ತನ್ನ ಜೀವನದೊಂದಿಗೆ ಒಂದಲ್ಲ ಒಂದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ಸುಸ್ಥಿರ ಆರೊಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.
ಮಾನವನ ಬದುಕು ಕೇವಲ ಓದು ಮತ್ತು ಅಂಕಪಟ್ಟಿಯ ಮೇಲೆ ನಿಂತಿಲ್ಲ,ನಾವು ಕ್ರೀಡೆಗಳಲ್ಲಿ ಭಾಗಿಸುವುದರ ಮೂಲಕ ನಮ್ಮ ಶಕ್ತಿ ಪ್ರದರ್ಶಿಸಬೇಕಾಗುತ್ತದೆ.ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧಾತ್ಮಕ ಮನೋಭಾವನೆಯಿಂದ ಭಾಗವಹಿಸುವುದು ಮುಖ್ಯ ಸೋತರೆ ಸಲಹೆಗಾರ ಆಗುತ್ತಿವೆ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಸಾಧ್ಯವಾಗುತ್ತದೆ. ಗೆದ್ದರೆ ನಾಯಕರಾಗುತ್ತೇವೆ,ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದರ ಜೊತೆಗೆ ವ್ಯಕ್ತಿತ್ವ ವಿಕಸನ ವಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಪ್ರಾoಶುಪಾಲ ಸುರೇಶಪ್ಪ,ಕೃಷ್ಣಮೂರ್ತಿ,ನೆಹರು ಕೊಡಕಣಿ,ಮಲ್ಲಿಕಾರ್ಜುನ,ಹರ್ಷಲ್ ರಾಮ್, ನಾಗರಾಜಗೌಡ ಚಿಕ್ಕಾವಲಿ,ಅಜೀತ್ ಪ್ರಭು, ಹೋಂಗಾರ್ಡ ಕಮಾಡೆಂಟ್ ರೇವಣಪ್ಪ,ಪವನ್, ಮಹೇಶ ಕೆ, ಸಂತೋಷ,ಮಹೇಶ,ಪ್ರೀತಂ, ವಿನಾಯಕ,ಸುಮಂತ್,ಚಿನ್ನು ಸೇರಿದಂತೆ ಹಲವರಿದ್ದರು.

— ಸಂದೀಪ ಯು.ಎಲ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ