ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರಿಗೆ ಬ್ಯಾಂಕ್ ನೋಟಿಸ್ ನಿಲ್ಲಿಸಿ

ಕಲಬುರಗಿ:ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬ್ಯಾಂಕುಗಳು ಸಾಲ ವಸೂಲಾತಿಗೆ ನೋಟಿಸ್ ನೀಡುತ್ತಿದ್ದು,ಸರಕಾರ ಕೂಡಲೇ ಮಧ್ಯಪ್ರವೇಶಿಸಿ ರೈತರಿಗೆ ಯಾವುದೇ ರೀತಿಯ ನೋಟಿಸ್ ನೀಡಬಾರದು ಎಂದು ಬಿಜೆಪಿ ಮುಖಂಡ ಗುಂಡು ಮತ್ತಿಮಡು ಅವರು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಬರ ಪರಿಸ್ಥಿತಿಯಿಂದ ರೈತರು ಸಾಕಷ್ಟು ಬೆಳೆ ಹಾನಿ ಅನುಭವಿಸಿದ್ದಾರೆ.ಇದಕ್ಕೆ ಸೂಕ್ತ ಪರಿಹಾರವನ್ನು ರೈತರಿಗೆ ಸರಕಾರ ಒದಗಿಸಿಲ್ಲ.ಕಳೆದ ತಿಂಗಳಲ್ಲಿ ಸುಮಾರು ರೈತರು ಆತ್ಮಹತ್ಯೆಗೆ ಒಳಗಾಗಿದ್ದಾರೆ ಹೀಗಿರುವಾಗ ಈಗ ಬ್ಯಾಂಕುಗಳಿಂದ ಸಾಲ ವಸೂಲಾತಿಗೆ ನೋಟಿಸ್ ನೀಡುತ್ತಿವೆ.ಇದನ್ನು ಸರಕಾರ ತಪ್ಪಿಸದೆ ಹೋದರೆ ಬರುವ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತವೆ.ಇದರ ಹೊಣೆಯನ್ನು ಸರಕಾರವೇ ಹೊರಬೇಕಾಗುತ್ತದೆ.ಸರಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರಕಾರದ ಮೇಲೆ ಬೊಟ್ಟು ತೋರಿಸದೆ ಕೂಡಲೇ ಸೂಕ್ತ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ