ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಣಿತ ಇಷ್ಟಪಟ್ಟು ಕಲಿಯುವವರಿಗೆ ಅತಿ ಸರಳ: ಶಂಕ್ರಪ್ಪ ಗೊಂದೇನೂರು

ವಡಗೇರಾ:ಗಣಿತ ಇಷ್ಟಪಟ್ಟು ಕಲಿಯುವವರಿಗೆ ಅತಿ ಸರಳವಾದ ವಿಷಯ ಇದಾಗಿದೆ ಗಣಿತ ವಿಷಯದ ಬಗ್ಗೆ ಮಕ್ಕಳಲ್ಲಿ ಭಯ ಬೇಡ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಡಗೇರಾ ತಾಲೂಕು ಅಧ್ಯಕ್ಷ ಶಂಕ್ರಪ್ಪ ಗೊಂದೇನೂರ ಹೇಳಿದರು.ಶ್ರೀನಿವಾಸ್ ರಾಮಾನುಜನ್ ಅಯ್ಯಂಗಾರ್ ಅವರ ಜನ್ಮದಿನದ ಅಂಗವಾಗಿ ವಡಗೇರಾ ಪಟ್ಟಣದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗಣಿತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕಲಿಯುವ ಆಸಕ್ತಿ ಛಲವಿದ್ದಾಗ ಎಲ್ಲಾ ಭಾಷೆಗಳು ಅತಿ ಸರಳವಾಗಿರುತ್ತವೆ ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ ಈಗಾಗಲೇ ಪರೀಕ್ಷೆಗಳು ಹತ್ತಿರ ಬರುತ್ತಿದ್ದು ವಿದ್ಯಾರ್ಥಿಗಳು ಹೆಚ್ಚು ಸಮಯ ಓದಿಗಾಗಿ ಮೀಸಲಿಟ್ಟು ಈ ಬಾರಿ ಉತ್ತಮ ಫಲಿತಾಂಶ ಪಡೆದು ತಾಲೂಕು ಜಿಲ್ಲೆಗೆ ಕೀರ್ತಿ ತರುವಂತೆ ಮಕ್ಕಳಿಗೆ ಕಿವಿಮಾತು ಹೇಳಿದರು ಈ ಸಮಯದಲ್ಲಿ ಮಕ್ಕಳು ಗಣಿತ ವಿಷಯಕ್ಕೆ ಸಂಬಂಧಿಸಿದ ಚಿತ್ರಗಳನ್ನು ರಂಗೋಲಿ ಮೂಲಕ ಬಿಡಿಸಿ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ ವಸತಿ ಶಾಲೆ ಪ್ರಾಂಶುಪಾಲರಾದ ಶಾಂತಾ ಸಜ್ಜನ್.ಡಿ.ಡಿ.ಯು.ಶಾಲೆಯ ಮುಖ್ಯ ಗುರುಗಳಾದ ಸತೀಶ್ ಶಿಕ್ಷಕರಾದ ಬೀರಪ್ಪ ಸಂಕಿನ, ಅಪ್ಪಾಸಾಬ್.ಕೆ ಅಬ್ದುಲ್ ಭಾಷಾ,ಬಸವರಾಜ್ ಪಾಟೀಲ್ ಹೊರಟೂರ,ಆಶೀರ್ವಾದ,ಮಂಜುಳಾ. ನೀತಿ ಪಾಟೀಲ್,ಭಾಗ್ಯಶ್ರೀ,ಪ್ರತಿಭಾ,ಭರತೇಶ್ವರಿ,ಮಮತಾ ಹಾಗೂ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು,
ವರದಿ:ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ