ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯ ಸರ್ಕಾರ ಕೂಡಲೇ ಪತ್ರಕರ್ತರ ಬೇಡಿಕೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಲಿ:ಮಹೆಬೂಬ ಕೆ ಸಿ ವಕೀಲರ ಆಗ್ರಹ

ಕಲ್ಬುರ್ಗಿ:ಪತ್ರಿಕಾ ರಂಗವನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಮಾನ್ಯ ಸರ್ವೋಚ್ಚ ನ್ಯಾಯಾಲಯವೇ ಸ್ಪಷ್ಟವಾಗಿ ಹೇಳಿದೆ ಹಾಗೂ ನಮ್ಮ ರಾಜ್ಯದಲ್ಲಿ ಸುಮಾರು ಹದಿನಾರು ಸಾವಿರಕ್ಕೂ ಹೆಚ್ಚು ಪತ್ರಕರ್ತರು ಒಂದಿಲ್ಲ ಒಂದು ಸುದ್ದಿ ಮಾಧ್ಯಮಗಳಲ್ಲಿ ತಮ್ಮ ಹರಿತವಾದ ಲೇಖನಿಯ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವುದರೊಂದಿಗೆ ಸರ್ಕಾರಕ್ಕೆ ಕಣ್ಣು ತೆರೆಸುವ ಕೆಲಸ ಮಾಡುತ್ತಿದ್ದಾರೆ ಅದೇ ರೀತಿಯಾಗಿ ಜೀವದ ಹಂಗು ತೊರೆದು ಸಮಾಜದ ಒಳಿತಿಗಾಗಿ ಶ್ರಮಿಸುವ ಪತ್ರಕರ್ತರಿಗೆ ಸರಕಾರದಿಂದ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯಗಳು ಸಿಗದಿರುವುದು ದುರ್ದೈವದ ಸಂಗತಿಯಾಗಿದೆ ಎಂದು ಮೆಹಬೂಬ್ ಕೆ ಸಿ ವಕೀಲರು ಸರ್ಕಾರಕ್ಕೆ ಚಾಟಿ ಬಿಸಿದ್ದಾರೆ ಹಾಗೂ ನಮ್ಮ ದೇಶದಲ್ಲಿ ಆಗಲಿ ಅಥವಾ ರಾಜ್ಯದಲ್ಲಿ ಆಗಲಿ ಯಾವುದೇ ಸರ್ಕಾರ ಬಂದರೂ 145 ಕೋಟಿ ಜನಸಂಖ್ಯೆಗೆ ಸುಗಮವಾದ ಆಡಳಿತ ನೀಡಬೇಕಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾರಂಗದ ಪತ್ರಕರ್ತರ ಪಾತ್ರ ಮಹತ್ವದ್ದು ಎಂದು ಇಂದಿನ ರಾಜಕಾರಣಿಗಳು ಹಾಗೂ ರಾಜ್ಯದ ನಮ್ಮನ್ನು ಆಳುವ ಸರಕಾರಗಳು ಗಮನಿಸಬೇಕಾಗಿದೆ ಶೀಘ್ರದಲ್ಲಿ ಪತ್ರಕರ್ತರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯಗಳು ಸರ್ಕಾರದ ವತಿಯಿಂದ ದೊರೆತರೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಟ್ಟ ಪತ್ರಿಕಾ ಮಾಧ್ಯಮಕ್ಕೆ ಹಾಗೂ ಸಂವಿಧಾನಾತ್ಮಕ ಕಾನೂನಿನ ಚೌಕಟ್ಟಿಗೆ ಗೌರವ ಸಲ್ಲಿಸಿದಂತೆ ಎಂದು ಯಡ್ರಾಮಿ ತಾಲೂಕಿನ ಮಹೆಬೂಬ್ ಕೆ ಸಿ ವಕೀಲರು ಬಿಳವಾರ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ