ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಯ ಕರ್ನಾಟಕದಿಂದ ನಾಡು ನುಡಿ ರಕ್ಷಣೆಗೆ ಯಶಸ್ವಿ ಹೋರಾಟ:ನಾಲ್ವಾರ್ ಶ್ರೀ ಸಿದ್ದ ತೋಟೇಂದ್ರ ಶಿವಾಚಾರ್ಯ ಸ್ವಾಮೀಜಿ

ಯಾದಗಿರಿ:ಜಯ ಕರ್ನಾಟಕ ಸಂಘಟನೆಯ ಹೆಸರಲ್ಲಿಯೇ ಜಯವಿದೆ ಹೀಗಾಗಿ ಈ ಸಂಘಟನೆ ಕನ್ನಡ ನಾಡು ನುಡಿಗಾಗಿ ಯಶಸ್ವಿ ಹೋರಾಟ ಮಾಡುತ್ತಿದೆ ಎಂದು ನಾಲ್ವಾರ್ ಕೋರಿಸಿದ್ದೇಶ್ವರ ಮಠದ ಶ್ರೀ ಶ್ರೀ ಡಾ.ಸಿದ್ದತೋಟೆoದ್ರ ಶಿವಾಚಾರ್ಯರು ಅಬಿಪ್ರಾಯಪಟ್ಟರು.
ನಮ್ಮ ಜಯ ಕರ್ನಾಟಕ ಸಂಘಟನೆ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ 50ನೇ ಸುವರ್ಣ ಕರ್ನಾಟಕ ಮಹೋತ್ಸವದ ಪ್ರಯುಕ್ತ ಜರುಗಿದ “ಯಾದಗಿರಿ ಜಿಲ್ಲಾ ಉತ್ಸವ” ಕಾರ್ಯಕ್ರಮಕ್ಕೆ ಆಗಮಿಸಿದ ದರಾ ಬೇಂದ್ರೆಯಂತವರು ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿದ ವಿಶೇಷತೆ ನಮ್ಮ ಮುಂದೆ ಇದೆ ಎಂದು ಹೇಳಿದರು.
ಕನ್ನಡ ಪದದಲ್ಲಿ ವಿಶೇಷತೆ ಇದೆ ಎಂದು ಶ್ರೀಗಳು ನುಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು,ಜಯ ಕರ್ನಾಟಕ ಸಂಘಟನೆ ಜಿಲ್ಲೆಯಲ್ಲಿ ಉತ್ತಮ ಕಾರ್ಯ ಮಾಡುತ್ತಿದೆ ಎಂದರು.
ಹನುಮೇಗೌಡ ಬೀರನಕಲ್ ಮಾತನಾಡಿ ಜಯ ಕರ್ನಾಟಕ ವರ್ಷಗಳಿಂದ ಗಟ್ಟಿಯಾಗಿ ಕೆಲಸ ಮಾಡುತ್ತಿದೆ,ಕೋವಿಡ್ ಸಂದರ್ಭದಲ್ಲಿ ಜೀವದ ಹಂಗುತೊರೆದು ಅನ್ನದಾನ ಮಾಡಿದೆ.ಸಾಮಾಜಿಕ ಸಂಘಟನೆಯನ್ನು ಮಾಡುತ್ತಿದೆ ನನ್ನ ಬೆಂಬಲ ಸಂಘಟನೆಗೆ ಇದೆ ಎಂದರು.
ರಾಜ್ಯಾಧ್ಯಕ್ಷ ಬಿ.ಎನ್.ಜಗದೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಜ್ಯದ ಉದ್ದಗಲಕ್ಕೂ ಸಂಘಟನೆ ಆಗಿದೆ ಅದೇ ರೀತಿ ಜಿಲ್ಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.

“ನಮ್ಮ ಯಾದಗಿರಿ ಜಿಲ್ಲಾ ಉತ್ಸವ” ಕಾರ್ಯಕ್ರಮಕ್ಕೆ ನಾಲವರ ಕೋರಿಸಿದ್ದೇಶ್ವರ ಮಠದ ಶ್ರೀ ಶ್ರೀ ಡಾ. ಸಿದ್ದತೋಟೆoದ್ರ ಶಿವಾಚಾರ್ಯರು,ಮಹರ್ಷಿ ವಾಲ್ಮೀಕಿ ಆಶ್ರಮದ ಶ್ರೀ ವರದಾನೇಶ್ವರ ಮಹಾಸ್ವಾಮಿಗಳು, ಕನ್ನಡ ಚಲನಚಿತ್ರ ನಟರಾದ ವಿಕ್ಟರಿ ಶರಣ್,ಚೋಳ ಸಿನಿಮಾದ ನಟರಾದ ರೂರಲ್ ಅಂಜನ್,ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷರಾದ ಶ್ರೀ ಬಿ ಎನ್ ಜಗದೀಶ್,ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಹೆಚ್ ರಾಮಚಂದ್ರಪ್ಪ,ವಿಜಯಕುಮಾರ್ ಮೊಗ್ದoಪುರ, ಯಾದಗಿರಿ ಶಾಸಕರಾದ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರು,ಪ್ರಥಮ ದರ್ಜೆ ಗುತ್ತಿಗೆದಾರರಾದ ಶ್ರೀ ಹಣಮೇಗೌಡ ಬಿರನಕಲ್,ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷರಾದ ಶ್ರೀ ಗೌಡಪ್ಪಗೌಡ ಆಲ್ದಾಳ್ ಕರುನಾಡಿನ ಖ್ಯಾತ ಹಾಸ್ಯ ಕಲಾವಿದರು ಹಾಗೂ ಯಾದಗಿರಿ ಜಿಲ್ಲಾ ಗಣ್ಯಮಾನ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ:ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ