ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೈಲಹೊಂಗಲ ಹೋರಾಟಗಾರರಿಗೆ ಶಿವಮೊಗ್ಗದಲ್ಲೂ ಬೆಂಬಲ:ಕೂಡಲೇ ಹಕ್ಕುಪತ್ರ ನೀಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯ:ಜಿಲ್ಲಾಧಿಕಾರಿಗಳ ಮೂಲಕ ಮನವಿ

ಶಿವಮೊಗ್ಗ:ಬೈಲಹೊಂಗಲ ಹರಳಯ್ಯ ಕಾಲನಿಯಲ್ಲಿ 50 ವರ್ಷಗಳಿಂದ ವಾಸಿಸುತ್ತಿರುವ,40 ಕೊಳಗೇರಿ ಕುಟುಂಬ ನಿವಾಸಿಗಳಿಗೆ ಈ ಕೂಡಲೇ ನಿವೇಶನದ ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಕರ್ನಾಟಕ ತ್ರಿಮತಸ್ಥ ಶ್ರೀಗುರು ರವಿದಾಸ್ ಪರಿಷತ್,(ರಿ.) ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಅಹಿಂದ ವರ್ಗಕ್ಕೆ ಸೇರಿದ ಕೊಳೆಗೇರಿ ನಿವಾಸಿಗಳಾದ,40 ಬಡ ಕುಟುಂಬಗಳು ಕಳೆದ 50 ವರ್ಷಗಳಿಂದ ಕೊಳೆಗೇರಿಯಲ್ಲಿ,ತಮ್ಮ ಜೀವನವನ್ನು ನಿರ್ವಹಿಸುತ್ತಿದ್ದು ಸಂಬಂಧಪಟ್ಟ ಜನಪ್ರತಿನಿಧಿಗಳಿಗೂ, ಇಲಾಖೆಗಳಿಗೂ,ಹಕ್ಕುಪತ್ರಕ್ಕಾಗಿ ಹಲವಾರು ಬಾರಿ ಮನವಿ ನೀಡುತ್ತ ಬಂದಿದ್ದಾರೆ ಆದರೆ ಇದುವರೆಗೂ ಕೊಳಚೆ ನಿಗಮ ಮಂಡಳಿಯಿಂದ ಹಕ್ಕುಪತ್ರ ನೀಡಿರುವುದಿಲ್ಲ ಅರ್ಧ ಶತಮಾನವೇ ಕಳೆದರೂ ಮನವಿಗಳಿಗೆ ಯಾವುದೇ ಪ್ರತಿಫಲ, ಪ್ರಯೋಜನಗಳನ್ನು ಕಾಣದ ಕೊಳಗೇರಿ ನಿವಾಸಿಗಳು ದಿನಾಂಕ 04/12/2023ರಿಂದ ಹಕ್ಕುಪತ್ರಕ್ಕಾಗಿ ಅಹೋ ರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಾ ಬಯಲಲ್ಲಿ ಕುಳಿತಿದ್ದಾರೆ.
ಸರ್ಕಾರವು ಧರಣಿ ಕುಳಿತ ಈ ಕೊಳೆಗೇರಿ ನಿವಾಸಿಗಳಿಗೆ ತಕ್ಷಣವೇ ಹಕ್ಕುಪತ್ರ ನೀಡಬೇಕೆಂದು ಕರ್ನಾಟಕ ತ್ರಿಮತಸ್ಥ ಶ್ರೀ ಗುರು ರವಿದಾಸ್ ಪರಿಷತ್ ಗೌರವಪೂರ್ವಕವಾಗಿ ಒತ್ತಾಯಿಸುತ್ತದೆ ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ಮನವಿಯಲ್ಲಿ ತಿಳಿಸಿದ್ದಾರೆ.
ಮನವಿ ನೀಡುವ ಸಂದರ್ಭದಲ್ಲಿ ಕರ್ನಾಟಕ ತ್ರಿಮತಸ್ಥ ಶ್ರೀಗುರು ರವಿದಾಸ್ ಪರಿಷತ್(ರಿ.) ಜಿಲ್ಲಾ ಸಂಚಾಲಕ ಚನ್ನವೀರಪ್ಪ ಗಾಮನಗಟ್ಟಿ,ಸಮಗಾರ ಸಮಾಜದ ಜಿಲ್ಲಾ ಅಧ್ಯಕ್ಷ ವೆಂಕಟರಮಣ,ಉಪಾಧ್ಯಕ್ಷ
ಗೋವಿಂದನಾಯ್ಕ್,ಶಿವಾನಂದ,ಕಲ್ಲೇಶ್,ಗೋಪಾಲ, ಮಂಜುನಾಥ್,ನಾಗೇಶ್,ಲೋಕೇಶ್,ಚೇತನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ:ಕೆ ಆರ್ ಶಂಕರ್,ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ