ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಚಿವ ಶಿವಾನಂದ ಪಾಟೀಲ್ ಹೇಳಿಕೆ ‌ಖಂಡಿಸಿ ರೈತರ ಪ್ರತಿಭಟನೆ

ಗುಂಡ್ಲುಪೇಟೆ:ರೈತರು ‘ಬರ’ ಬರಲಿ ಎಂದು ಬಯಸುತ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿಕೆಯನ್ನು ಖಂಡಿಸಿ ತಾಲ್ಲೂಕು ರೈತಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಹಳೆ ಪ್ರವಾಸಿ ಮಂದಿರದಿಂದ ಹೊರಟ ಪ‍್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮೂಲಕ ತೆರಳಿ‌ ಎಂ.ಡಿ.ಸಿ.ಸಿ ಬ್ಯಾಂಕ್ ವೃತ್ತದ ಬಳಿ ಕೆಲಹೊತ್ತು ರಸ್ತೆ ತಡೆ ನಡಸಿ ಶಿವಾನಂದ ಪಾಟೀಲ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾ ‌ಉಪಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ‘ರೈತರು ಬರಗಾಲ ಬರಬೇಕು ಎಂದು ಬಯಸುತ್ತಾರೆ ಎಂದು‌ ಹೇಳಿರುವುದು ಅಕ್ಷಮ್ಯ ಅಪರಾಧ ಕೂಡಲೇ ರೈತರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
‘ಶಿವನಾಂದ ಪಾಟೀಲ ನಾಲಿಗೆಯ ಮೇಲೆ ಹಿಡಿತವಿಲ್ಲದೆ ರೈತರ ಮೇಲೆ ಪದೆ ಪದೆ ಅಸಂಬದ್ಧವಾದ ಹೇಳಿಕೆಯನ್ನು ನೀಡುತ್ತಿದ್ದಾರೆ ಅವರು ಕಳೆದ ವರ್ಷ ರೈತರ ಆತ್ಮಹತ್ಯೆ ವಿಚಾರದ ಬಗ್ಗೆಯೂ ಹಗುರವಾಗಿ ಮಾತನಾಡಿದ್ದರು ಆಗ ಅವರಿಗೆ ತಕ್ಕ ಪಾಠ ಕಲಿಸಿದ್ದೆವು ಪ್ರತಿ ಬಾರಿಯೂ ಅವರು ಇಂತಹದೇ ಹೇಳಿಕೆಯನ್ನು ನೀಡುತಿದ್ದಾರೆ ಸಕ್ಕರೆ ‘ಸಚಿವ‌ ಶಿವನಂದ ಪಾಟೀಲ್ ತಕ್ಷಣ ರೈತರ ಕ್ಷಮೆ ಕೇಳಬೇಕು ಇಲ್ಲದಿದ್ದರೆ,ಅವರು ರಾಜ್ಯದಲ್ಲಿ ಎಲ್ಲಿಯೂ ಓಡಾಡುವುದಕ್ಕೆ ನಾವು ಬಿಡುವುದಿಲ್ಲ ಇಂದು ಸರಳವಾಗಿ‌ ಪ್ರತಿಭಟನೆ ನಡೆಸಲಾಗಿದ್ದು ಸರಕಾರ ಅವರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ’ ಎಂದು ಶಿವಪುರ ಮಹದೇವಪ್ಪ ಎಚ್ಚರಿಸಿದರು.
ರೈತರು ಬರ ಬಯಸುವುದಿಲ್ಲ ನಿಮ್ಮಂತಹ ನೀಚ ರಾಜಕಾರಣಿಗಳು ಬರ ಹೆಸರಲ್ಲಿ ಜನರ ಹಣವನ್ನು ಕೊಳ್ಳೆಹೊಡೆಯಲು ಯೋಚಿಸುತ್ತಿರಾ ಎಂದು ಕಿಡಿಕಾರಿದರು.
ರೈತರನ್ನು ಎದುರು ಹಾಕಿಕೊಂಡ ಸರಕಾರ ಬಹಳ‌ ದಿನಗಳು ಉಳಿಯುವುದಿಲ್ಲ ಇದಕ್ಕೆ ಉತ್ತಮ ಉದಾಹರಣೆ ರೈತರಿಗೆ ಗುಂಡಿಟ್ಟ‌ ಗುಂಡೂರಾವ್ ಸರಕಾರವನ್ನು ‌ಅಧಿಕಾರದಿಂದ ಕೆಳಗೆ ಇಳಿಸಿ ಮನೆಗೆ ಕಳುಹಿಸಿರುವ ಇತಿಹಾಸವಿದೆ ಹಾಗಾಗಿ ರೈತರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡುವಂತೆ ಹೇಳಿದರು.ಪ್ರತಿಭಟನೆಯಲ್ಲಿ ತಾಲ್ಲೂಕು ರೈತ ಸಂಘದ ಉಪಾಧ್ಯಕ್ಷ,ಮಹೇಂದ್ರ,ಪಾಪಣ್ಣ,ಖಜಾಂಚಿ ನಾಗರಾಜಪ್ಪ,ಸಂಘಟನಾ ಕಾರ್ಯದರ್ಶಿ ಅಶೋಕ್,ಪ್ರಧಾನ ಕಾರ್ಯದರ್ಶಿ ಶಿವಣ್ಣ ನಾಗರಾಜು,ಕಾಂತರಾಜು,ಮಂಜಪ್ಪ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ