ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತ್ರಕರ್ತ ಅನಂತ ಕುಮಾರ್ ಗೆ ವೀರಯೋಧ ಮುರಳಿ ಪ್ರಶಸ್ತಿ

ಭದ್ರಾವತಿ:ನಗರದ ಅಪೇಕ್ಷ ಕಲಾವೃಂದದ ವತಿಯಿಂದ ಪ್ರತಿವರ್ಷ ವೀರಯೋಧ ಮುರಳಿ ಸ್ಮರಣಾರ್ಥ ನೀಡಲಾಗುವ 2023ನೇ ಸಾಲಿನ ವೀರಯೋಧ ಮುರಳಿ ಪ್ರಶಸ್ತಿಯನ್ನು ಈ ಬಾರಿ ಕನ್ನಡಪ್ರಭ ಪತ್ರಿಕೆಯ ಅರೆಕಾಲಿಕ ವರದಿಗಾರ ಹಾಗೂ ಪತ್ರಕರ್ತ ಅನಂತಕುಮಾರ್ ರವರಿಗೆ ನೀಡಿ ಗೌರವಿಸಲಾಯಿತು.
ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಪೇಕ್ಷ ನೃತ್ಯ ಕಲಾವೃಂದ ಹಾಗೂ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ಕನ್ನಡ ರಾಜ್ಯೋತ್ಸವ ಸಂಗೀತ ಸಂಭ್ರಮ ಹಾಗೂ
ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ”ದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಬಿ.ಕೆ.ಜಗನ್ನಾಥ್, ರೇವಣಪ್ಪ,ಜಿ.ಪಂ ಮಾಜಿ ಸದಸ್ಯ ಮಣಿಶೇಖರ್, ಸಮಾಜ ಸೇವಕ ಸ್ನೇಹಜೀವಿ ಪೊಲೀಸ್ ಉಮೇಶ್, ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ
ಡಾ|| ಶಿವಪ್ರಕಾಶ್,ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ,ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ.ನಾಗರಾಜ್,ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ದೇವರಾಜ್,ಅಪೇಕ್ಷ ನೃತ್ಯಕಲಾ ವೃಂದದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ,ಅಪೇಕ್ಷ ಮಂಜುನಾಥ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ