ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ:7 ಸೂಚನೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್

ಶಿವಮೊಗ್ಗ:ಮುಂಬರುವ ಹೊಸ ವರ್ಷ ಆಚರಣೆಯ ಸಂಬಂಧ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಗುರುವಾರ ಸಂಜೆ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ರವರ ನೇತೃತ್ವದಲ್ಲಿ,ಶಿವಮೊಗ್ಗ ನಗರದ ಹೋಟೆಲ್,ಕ್ಲಬ್ ಮತ್ತು ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆ ನಡೆಸಿ ಪ್ರಮುಖವಾಗಿ ಏಳು ಸೂಚನೆಗಳನ್ನು ನೀಡಿದ್ದಾರೆ.

1)ಹೊಸ ವರ್ಷಾಚರಣೆ ಸಮಾರಂಭವನ್ನು ಆದಷ್ಟು ಶಿಸ್ತಿನಿಂದ,ಮಿತಿಯ ಒಳಗೆ ಆಚರಿಸಿ,ಮಿತಿಯನ್ನು ಮೀರಿದ್ದಲ್ಲಿ ಅಪಘಾತಗಳು ನಡೆಯುವ ಸಂಭವವಿರುತ್ತದೆ ಮತ್ತು ಹೊಸ ವರ್ಷದ ಸಂಭ್ರಮಾಚರಣೆಯನ್ನು ಬೆಳಗಿನ ಜಾವ 01:00 ಗಂಟೆಯ ಒಳಗಾಗಿ ಮುಕ್ತಾಯಗೊಳಿಸಬೇಕು.

2)ವಾಹನ ಸವಾರರ ಸುರಕ್ಷತೆಯ ದೃಷ್ಠಿಯಿಂದ ಮಧ್ಯಪಾನ ಮಾಡಿ ವಾಹನವನ್ನು ಚಲಾಯಿಸಬಾರದು,ಮಧ್ಯಪಾನ ಮಾಡದೇ ಇರುವವರು ಮಾತ್ರ ವಾಹನ ಚಾಲನೆ ಮಾಡುವುದು ಸೂಕ್ತ.

3)ಘನ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಹೊರಾಂಗಣದ ಸಂಭ್ರಮಾಚರಣೆಗಳಲ್ಲಿ ರಾತ್ರಿ 10 ಗಂಟೆಯವರೆಗೆ ನಿಗದಿಪಡಿಸಿದ ಶಬ್ದ ಮಿತಿಯ ಒಳಗೆ ಸೌಂಡ್ ಸಿಸ್ಟಂ ಗಳನ್ನು ಬಳಸುವುದು ಮತ್ತು ರಾತ್ರಿ 10 ಗಂಟೆಯ ನಂತರ ಕೇವಲ ಒಳಾಂಗಣ ಸಂಭ್ರಮಾಚರಣೆಗಳಲ್ಲಿ ಮಾತ್ರ ಶಬ್ದ ಮಿತಿಯ ಒಳಗೆ ಸೌಂಡ್ ಸಿಸ್ಟಂ ಗಳನ್ನು ಬಳಸುವುದು.

4)ಹೊಸ ವರ್ಷಾಚರಣೆ ಸಮಾರಂಭದ ಆಯೋಜಕರು,ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು, ಕಾನೂನಿನ ಚೌಕಟ್ಟಿನ ಒಳಗೆ ನಡೆಯುವ ಕಾರ್ಯಕ್ರಮಗಳಿಗೆ ಯಾವುದೇ ಅಭ್ಯಂತರವಿರುದಿಲ್ಲ. ಮುಖ್ಯವಾಗಿ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.

5)ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವವರ ಸುರಕ್ಷತೆಯ ದೃಷ್ಠಿಯಿಂದ,ಅಪಾಯವಿರುವ ಸ್ಥಳಗಳಾದ ಮೇಲಂತಸ್ತು (ಟಾಪ್ ರೂಫ್) ಗಳಲ್ಲಿ ಮತ್ತು ಎತ್ತರವಾದ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬಾರದು ಆದ್ದರಿಂದ ಎಲ್ಲಾ ಸುರಕ್ಷತಾ ನಿಯಮಗಳನ್ನು ಮತ್ತು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ,ಸುರಕ್ಷಿತವಾದ ಸ್ಥಳಗಳಲ್ಲಿಯೇ ಕಾರ್ಯಕ್ರಮವನ್ನು ಆಯೋಜನೆ ಮಾಡುವುದು ಸೂಕ್ತ.

6)ಸಾರ್ವಜನಿಕರ ಹಿತ ದೃಷ್ಠಿಯಿಂದ, ಸಂಭ್ರಮಾಚರಣೆಯನ್ನು ಕಾರ್ಯಕ್ರಮ ಆಯೋಜಿಸಿರುವ ಸ್ಥಳದ ಹೊರಗಡೆ, ರಸ್ತೆಬದಿಗಳಲ್ಲಿ ಮಾಡದೇ,ನಿಗದಿಪಡಿಸಿರುವ ಸ್ಥಳದ ಒಳಗಡೆಯೇ ಮಾಡುವಂತೆ ನೋಡಿಕೊಳ್ಳುವುದು ಕಾರ್ಯಕ್ರಮದ ಆಯೋಜಕರ ಜವಾಬ್ದಾರಿಯಾಗಿರುತ್ತದೆ.

7)ಯಾವುದೇ ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್:9480803300/08182-261413 ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡುವಂತೆ ಜಿಲ್ಲಾ ರಕ್ಷಣಾಧಿಕಾರಿಯವರು ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹಾಗೂ ಉಪವಿಭಾಗದ ಡಿ ವೈ ಎಸ್ ಪಿ ಉಪಸ್ಥಿತರಿದ್ದರು.

ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ