ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆನೆ ದಾಳಿಗೆ ರೈತನ ಜೋಳದ ರಾಶಿ ಫಸಲು ನಾಶ ನೊಂದವರ ಆಕ್ರೋಶ

ಹನೂರು:ಕ್ಷೇತ್ರ ವ್ಯಾಪ್ತಿಯಲ್ಲಿನ
ಪಚ್ಚೆದೊಡ್ಡಿ ಗ್ರಾಮದ ಸರ್ವೆನಂಬರ್ 537ರಲ್ಲಿ ಸಣ್ಣೆಗೌಡರಿಗೆ ಸೇರಿದ ಏಳು ಎಕ್ರೆ ಜಮಿನಿನಲ್ಲಿ ರಾಶಿಯಾಕಿದ್ದ ಜೋಳವನ್ನು ರಾತ್ರಿ ಸಮಯದಲ್ಲಿ ಆನೆ ದಾಳಿಯಿಂದ ಸರಿ ಸುಮಾರು ಇಪ್ಪತ್ತು ಕುಂಟಾಲ್ ಗು ಹೆಚ್ಚು ಜೋಳವನ್ನು ಮೆಯ್ದು ಹೋಗಿದ್ದು ಇದರಿಂದ ಸಣ್ಣೆಗೌಡ ಎಂಬುವವರಿಗೆ ಅಪಾರ ಹಾನಿಯಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಇದರಿಂದ ಹೆಚ್ಚು ನಷ್ಟವುಷ್ಟಂಟಾಗಿದ್ದು ಅಲ್ಲದೆ ಇಪ್ಪತ್ತು ಸಾವಿರ ರೂಗಳ ಬೆಲೆ ಬಾಳುವ ಟಾರ್ಪಲ್ ಗಳನ್ನು ಸಹ ಹರಿದಿದ್ದು ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಾಗ ಅಧಿಕಾರಿಗಳು ಸ್ಥಳ ಮಹಜರು ಮಾಡಿ ಹೋಗಿದ್ದು ರೈತನಿಗೆ ಯಾವುದೆ ಪರಿಹಾರದ ಭರವಸೆಯನ್ನು ನೀಡದೆ ವಾಪಾಸು ತೆರಳಿದ್ದು ಸುತ್ತಮುತ್ತಲಿನ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.ಈ ಸಂಬಂಧವಾಗಿ ರೈತ ಮುಖಂಡ ಬಸವರಾಜು ಮಾತನಾಡಿ ಅರಣ್ಯ ಇಲಾಖೆಯ ದೋರಣೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು.ಈ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸರಿಯಾದ ಮಹಜರು ಮಾಡಿ ಸರಿಯಾದ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ತಿಳಿಸಿದರು. ಇದೇ ಸಮಯದಲ್ಲಿ
ರೈತರ ಮುಖಂಡ ಕರ್ನಾಟಕ ರಾಜ್ಯ ರೈತ ಸಂಘದ ಸಂಘಟನೆ ಕಾರ್ಯದರ್ಶಿ ಬಸವರಾಜು ,ಅರಣ್ಯ ಇಲಾಖೆಯ ಅಧಿಕಾರಿ ಅನಿಲ್ ಕುಮಾರ್ ,ಮುತ್ತುರಾಜು ,ಸುರೇಶ ,ಶ್ರೀಕಂಠಪ್ಪ ಅರಸು ,ನವೀನ್ ,ಗೋವಿಂದೆಗೌಡ ,ಇನ್ನಿತರರು ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ