ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆನೆ ದಾಳಿಗೆ ಶಾಲಾ ಕಟ್ಟಡ ಧ್ವಂಸ,ದುರಸ್ತಿ ಮಾಡದ ಅರಣ್ಯ ಇಲಾಖೆ:ಗ್ರಾಮಸ್ಥರ ಆಕ್ರೋಶ

ಹನೂರು:ಕ್ಷೇತ್ರ ವ್ಯಾಪ್ತಿಯಲ್ಲಿನ
ಸೂಳೆರಿ ಪಾಳ್ಯ ಗ್ರಾಮ ಪಂಚಾಯಿತಿಯ ಪಚ್ಚೆದೊಡ್ಡಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆನೆ ದಾಳಿಗೆ ಸುತ್ತು ಗೊಡೆ ಮತ್ತು ಗೇಟ್ ಮುರಿದು ಹೋಗಿರುವ ಘಟನೆ ನಡೆದು ಎರಡು ತಿಂಗಳು ಕಳೆದರು ದುರಸ್ತಿ ಕಾರ್ಯಮಾಡದ ಕಾರಣ ಅರಣ್ಯ ಇಲಾಖೆ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವಿಷಯವಾಗಿ ಪ್ರತಿಕ್ರಿಯಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರಾದಿಯಾಗಿ ಗ್ರಾಮಸ್ಥರೆಲ್ಲಾ ಅರಣ್ಯ ಇಲಾಖೆಗೆ ಅನುದಾನ ನೀಡಲು ಅರ್ಜಿಯನ್ನು ನೀಡಿದರೂ ಯಾವುದೇ ಪ್ರಯೋಜನವಿಲ್ಲ ಇದರಿಂದ ಶಾಲಾ ಮಕ್ಕಳು ದಿನ ನಿತ್ಯ ಶಾಲೆಗೆ ತೆರಳಲು ತೊಂದರೆಯಾಗುತ್ತದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮುತ್ತುರಾಜು ತಿಳಿಸಿದರು.
ಇದೇ ಸಮಯದಲ್ಲಿ ರೈತ ಮುಖಂಡ ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯದರ್ಶಿ ಬಸವರಾಜು, ಗ್ರಾಮದ ಯಜಮಾನರಾದ ಮನ್ನಾರೆ ಕ್ರಿಷ್ಣೆಗೌಡ್ರು, ಸುರೇಶ್,ರಾಜು,ನಾರಾಯಣಗೌಡ್ರು,ಪಚ್ಚೆಗೌಡ್ರು, ಸೇರಿದಂತೆ ಗ್ರಾಮಸ್ಥರು ಆಗ್ರಹಿಸಿದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ