ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆಬಿಎನ್:ಅಂತರಾಷ್ಟ್ರೀಯ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಕಲಬುರಗಿ:ಕೆಬಿಎನ್ ವಿಶ್ವವಿದ್ಯಾಲಯದ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ ಮತ್ತು ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ಸಂಘವು ಜಂಟಿಯಾಗಿ
‘ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದಲ್ಲಿ ಇತ್ತೀಚಿನ ಪ್ರಗತಿಗಳು’ ವಿಷಯದ ಬಗ್ಗೆ ಅಂತಾರಾಷ್ಟ್ರೀಯ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು
ಜ. 5 ರಂದು ಕೆಬಿಎನ್ ವಿವಿಯ ಸಭಂಗಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ವಿವಿಯ ಸಮ ಕುಲಾಧಿಪತಿ ಜನಾಬ್ ಸಯ್ಯದ್ ಮುಹಮ್ಮದ್ ಅಲಿ ಅಲ್ ಹುಸ್ಸೇನಿ ಉದ್ಘಾಟಿಸಲಿದ್ದಾರೆ.ಉಪಕುಲಪತಿ ಪ್ರೊ ಅಲಿ ರಜಾ ಮೂಸ್ವಿ,ವಿವಿ ನಿರ್ದೇಶಕ ಡಾ ಸಯ್ಯದ್ ಮುಸ್ತಫಾ ಅಲ್ ಹುಸ್ಸೇನಿ,ಪ್ರಭಾರಿ ಕುಲಸಚಿವೆ ಪ್ರೊ. ರುಕ್ಸರ್ ಫಾತಿಮಾ ಭಾಗವಹಿಸಲಿದ್ದಾರೆ.
ಇದುವರೆಗೆ ಸುಮಾರು 280 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.ಡಾ.ಆಶಾ ರಿಝಸಿಂಘಾನಿ ಪ್ಲೇಸ್ಮೆಂಟ ಅಕ್ರಿಟಾ ಸಿಂಡ್ರೋಮ ವಿಷಯದ ಬಗ್ಗೆ ಆನ್ಲೈನ್ ಮೂಲಕ ಮಾತನಾಡಲಿದ್ದಾರೆ.ಡಾ.ಸುನಂದ ಗರ್ಗೆಶ್ವರಿ ಇವರು” ಪ್ರಸೂತಿ ಮತ್ತು ಸ್ತ್ರೀರೋಗದ ಇತ್ತೀಚಿನ ಪ್ರವೃತ್ತಿಗಳು” ಎಂಬ ವಿಷಯ ಕುರಿತು ಡಾ.ವಿದ್ಯಾ ಥೋಬ್ಬಿ ಗೌರವಾನ್ವಿತ ಮಾತೃತ್ವ ಆರೈಕೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಡಾ.ಹೇಮಾ ದಿವಾಕರ ಆನ್ಲೈನ್ ಮೂಲಕ ರಿಚಿಂಗ್ ದಿ ಅನರಿಚಡ ಟ್ರೂ ಟೆಕ್ನಾಲಜಿ, ಡಾ ರಾಜಶ್ರೀ ಪಾಲದಿ ಸೀಜರೆನ್ ಸ್ಕ್ಯಾರ ಡಿಫೆಕ್ಟ್ ಅಂಡ್ ಅಬ್ಬನಾರ್ಮಲ ಯುಟೇರೈನ್ ಬ್ಲೀಡಿಂಗ ಎಂಬ ವಿಷಯದ ಬಗ್ಗೆ ವಿಷಯ ಮಂಡಿಸುವರು.
ನಂತರ ನಡೆಯುವ ಪ್ಯಾನೆಲ್ ಚರ್ಚೆಯಲ್ಲಿ ಡಾ. ಆಯಿಷಾ ಹುಮೆರಾ,ಡಾ.ಹರ್ಷ ರಾಮದುರ್ಗ,ಡಾ. ಸುಪ್ರಿಯಾ,ಡಾ.ಸ್ನೇಹಕೃಪಾ,ಡಾ.ಮೀತಾ,ಡಾ. ಫರ್ಹತ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ ಪೇಂಟಿಂಗ್ ಮತ್ತು ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಗುವುದು ಎಂದು ಕೆಬಿಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ