ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲ್ಬುರ್ಗಿ ಜಿಲ್ಲಾ ಪಂಚಾಯತಿ ಕಾರ್ಯಾಲಯದ ಮುಂದೆ ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಕಲ್ಬುರ್ಗಿ ಸುದ್ದಿ:ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಅವರ ತವರು ಕ್ಷೇತ್ರದಲ್ಲಿಯೆ ಹಗರಣ ನಡೆದಿದ್ದು ಈ ವಿಷಯದ ಕುರಿತು ತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕುರಿತು
ಆಳಂದ ತಾಲೂಕಿನ ಹೀರೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ಲೋಪವೆಸಗಿದ ಪಿಡಿಓನನ್ನು ಅಮಾನತ್ತುಗೊಳಿಸುವಂ
ತೆ ಮತ್ತು ಆಂದೋಲಾ,ಆಲೂರು,ಹಿಪ್ಪರಗಾ(ಎಸ್ ಎನ್),ಸಾಥಖೇಡ ಗ್ರಾಮ ಪಂಚಾಯತಿಗಳಲ್ಲಿ ಅವ್ಯವಹಾರ ನಡೆಸಿದ ಭ್ರಷ್ಟ ಪಿಡಿಓ ಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಹಾಗೂ ಸಾರ್ವಜನಿಕರ ಹಾಗೂ ಸರ್ಕಾರ ದುಡ್ಡನ್ನು ಕೊಳ್ಳೆ ಹೊಡೆದು ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿ ಜಿಲ್ಲಾ ಪಂಚಾಯತ ಕಾರ್ಯಾಲಯದ ಎದುರುಗಡೆ ಹಮ್ಮಿಕೊಳ್ಳಲಾದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ.ಇದಕ್ಕೆ ಸಂಬಂಧಪಟ್ಟ ಮುಖ್ಯ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಣಾಧಿಕಾರಿಗಳು ಇದುವರೆಗೂ ಯಾವುದೇ ರೀತಿಯಿಂದ ಸೂಕ್ತ ಕ್ರಮ ಜರುಗಿಸಿರುವುದಿಲ್ಲ ಕೂಡಲೇ ಸಂಬಂಧಪಟ್ಟ ಭ್ರಷ್ಟ ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ನಮ್ಮ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ ಎಂದು ಶ್ರೀರಾಮ ಸೇನೆಯ ಹೋರಾಟಗಾರರಾದ ಶರಣಪ್ಪರೆಡ್ಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ