ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲು ಚಿಗಾನೂರ ಒತ್ತಾಯ

ವಡಗೇರಾ:ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಕ್ಷರಾದ ಟಿ.ಎ.ನಾರಾಯಣಗೌಡ ಹಾಗೂ ಯಾದಗಿರಿ ಜಿಲ್ಲಾಧ್ಯಕ್ಷರಾದ ಟಿ ಎನ್ ಭೀಮು ನಾಯಕ ಹಾಗೂ ಇನ್ನುಳಿದ ಕರವೇ ಕಾರ್ಯಕರ್ತರನ್ನು ಕೂಡ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ವಡಗೇರಾ ಪಟ್ಟಣದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಈ ಪ್ರತಿಭಟನೆಯನ್ನು ಉದ್ದೇಶಿಸಿ ಕರವೇ ಮುಖಂಡ ಅಬ್ದುಲ್ ಚಿಗಾನೂರ ಮಾತನಾಡಿದರು ಕರ್ನಾಟಕದಲ್ಲಿ ಬೇರೆ ರಾಜ್ಯಗಳಿಂದ ಬರುವ ಅನ್ಯ ಭಾಷಿಕರಿಗೆ ಕನ್ನಡವೆಂದರೆ ತುಂಬಾ ಅಸಡ್ಡೆಯಾಗಿದೆ ಸರಕಾರದ ಮಾರ್ಗಸೂಚಿಯಂತೆ ಕನಿಷ್ಠ 60 ಶೇಕಡಾ ಕನ್ನಡ ಬಳಸಬೇಕು ಎಂಬ ಆದೇಶವಿದೆ ಆದರೆ ಕೆಲವರು ಇದನ್ನು ಉಲ್ಲಂಘಿಸಿರುವುದಕ್ಕೆ ನಮ್ಮ ಕರವೇ ವತಿಯಿಂದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು ಇದನ್ನು ಸಹಿಸದೆ ಪೊಲೀಸರು ನಮ್ಮವರನ್ನು ಬಂಧಿಸಿ ಸುಳ್ಳು ಕೇಸ್ ದಾಖಲಿಸಿರುವುದು ಖಂಡನೀಯ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಕೂಡಲೇ ಸರಕಾರ ಇವರನ್ನು ಬಿಡುಗಡೆಗೊಳಿಸಿ ಇವರ ಮೇಲಿನ ಕೇಸ್ ಗಳನ್ನು ವಾಪಸ್ ಪಡೆಯಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು . ವಡಗೇರಾ ಗ್ರೇಟ್ 2 ತಹಸಿಲ್ದಾರ್ ಪ್ರಕಾಶ್ ಹೊಸಮನಿ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಚೌಡಯ್ಯ ಬಾವುರ್,ಶಿವರಾಜ್ ನಾಡಗೌಡ,ಬಸವರಾಜ್ ನಾಯಕ,ಸತೀಶ್ ಜಡಿ, ಹಣಮಂತರಾಯ ತೇಕರಾಳ,ಸುರೇಶ ಬೆಳಗುಂದಿ,ಸಿದ್ದು ತುಮಕೂರು,ಶ್ರೀನಿವಾಸ್ ಮಡಿವಾಳ್,ಮಲ್ಲು ಜಡಿ,ಸುರೇಶ್ ಬಾಡದ,ಸೋಮು ಕರ್ನಾಳ,ಬಸ್ಸು ಗೌಡ,ಸಾಬರೆಡ್ಡಿ ಹೊರಟೂರು,ಮಮ್ಮದ್ ಕತಾಲಿ,ಶರಣು ಗೊಂದನೂರ,ಪೀರ್ ಸಾಬ ಮರಡಿ,ರಾಮು ದೇವರೆಡ್ಡಿ,ಜುಬಲಪ್ಪ ಕಟ್ಟಿಮನಿ,ಪಿಡ್ಡಪ್ಪ ನಾಯಕ. ಭೀಮರಾಯ ಕ್ಯಾತನಾಳ,ಘನಿಸಾಬ,ಬಸವರಾಜ ಕೊದ್ದಡ್ಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ:ಶಿವರಾಜ್ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ