ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಲ್ಪಸಂಖ್ಯಾತ ಕಾನೂನು ಪದವೀಧರರ ತರಬೇತಿಗೆ ಅರ್ಜಿ ಆಹ್ವಾನ

ಬಾಗಲಕೋಟೆ:ರಬಕವಿ-ಬನಹಟ್ಟಿ/ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯಿಂದ ಅಲ್ಪಸಂಖ್ಯಾತರ ಕಾನೂನು ಪದವೀಧರರ ತರಬೇತಿ ಭತ್ಯೆಗಾಗಿ 2023-2024 ನೇ ಸಾಲಿಗೆ ಅರ್ಹ ಮುಸ್ಲಿಂ, ಕ್ರಿಶ್ಚಿಯನ್,ಜೈನ್,ಬೌದ್ಧ,ಪಾರ್ಸಿ ಹಾಗೂ ಸಿಖ್ ಸಮುದಾಯದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜನೆವರಿ 16 ಕೊನೆಯ ದಿನವಾಗಿರುತ್ತದೆ.ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್ ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿರಬೇಕು ಮತ್ತು ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 30 ವರ್ಷ ವಯೋಮಿತಿ ಮೀರಿರಬಾರದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ಸರಕಾರಿ ವಕೀಲರು ಅಥವಾ ಕನಿಷ್ಠ 20 ವರ್ಷಗಳ ವಕೀಲ ವೃತ್ತಿಯಲ್ಲಿ ಅನುಭವವುಳ್ಳ ಯಾವುದೇ ಹಿರಿಯ ವಕೀಲರ ಅಧೀನದಲ್ಲಿ ತರಬೇತಿಗೆ ನಿಯೋಜಿಸಲಾಗುವುದು.
ಆಸಕ್ತ ಕಾನೂನು ಪದವೀಧರರು ನಿಗಧಿತ ಅರ್ಜಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ,ಅಲ್ಪಸಂಖ್ಯಾತರ ಮೌಲಾನಾ ಆಜಾದ ಭವನ ಡಿ.ಸಿ.ಕಛೇರಿ ಆವರಣ ಬಾಗಲಕೋಟೆ ಇವರಿಂದ ಪಡೆದು ನಿಗದಿಪಡಿಸಿದ ದಿನಾಂಕದೊಳಗೆ ಸಲ್ಲಿಸುವುದು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೂರವಾಣಿ ಸಂಖ್ಯೆ: 08354-200044 ಯನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ಆನಂದ ಮ.ಹೂಗಾರ.ರಬಕವಿ ಬನಹಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ