ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗವನ್ನು ಪಡೆಯುವುದು ಬಹಳ ಕಷ್ಟಕರ:ರವಿಕುಮಾರ್

ಕೊಟ್ಟೂರು:ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗವನ್ನು ಪಡೆಯುವುದು ಬಹಳ ಕಷ್ಟಕರ ಇಂತಹ ಸಂದರ್ಭದಲ್ಲಿ ದೇಶಪಾಂಡೆ ಉದ್ಯೋಗ ತರಬೇತಿ ಸಂಸ್ಥೆ ನಮ್ಮ ಮಹಾವಿದ್ಯಾಲಯದಲ್ಲಿ ಉದ್ಯೋಗವನ್ನು ಪಡೆಯುವ ನಿಟ್ಟಿನಲ್ಲಿ ತರಬೇತಿ ನೀಡುವ ಒಡಂಬಡಿಕೆ ಮಾಡಿಕೊಂಡು ಕೌಶಲ್ಯ ಆಧಾರಿತ ಉದ್ಯೋಗವನ್ನು ನೀಡಲು ಬಂದಿರುವುದು ಶ್ಲಾಘನೀಯ ಎಂದು ಪ್ರಾಚಾರ್ಯ ಡಾ.ಎಂ.ರವಿಕುಮಾರ್ ತಿಳಿಸಿದರು. ಕೊಟ್ಟೂರೇಶ್ವರ ಮಹಾವಿದ್ಯಾಲಯ ಹಾಗೂ ದೇಶಪಾಂಡೆ ಕೌಶಲ್ಯ ತರಬೇತಿ ಸಂಸ್ಥೆ ಹುಬ್ಬಳ್ಳಿ ಇವುಗಳ ಸಹಭಾಗಿತ್ವದಲ್ಲಿ ಬಿ ಎ,ಬಿಕಾಂ,ಬಿ ಎಸ್ ಸಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ ಕಾರ್ಯಗಾರ ಕಾರ್ಯಕ್ರಮದ
ಅಧ್ಯಕ್ಷತೆ ವಹಿಸಿ ಮಾತನಾಡಿದರು ಕಳೆದ ಮೂರು ವರ್ಷಗ ಳಿಂದ ಈ ಸಂಸ್ಥೆಯ ತರಬೇತಿಯನ್ನು ಪಡೆದು ನಮ್ಮ ಮಹಾವಿದ್ಯಾಲಯದ ಸುಮಾರು ನೂರಾರು ವಿದ್ಯಾರ್ಥಿಗಳು ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದಿರುವುದು ನಮ್ಮ ಕಾಲೇಜಿನ ಹೆಮ್ಮೆಯ ಸಂಗತಿ.ವಿದ್ಯಾರ್ಥಿಗಳಾದ ತಾವುಗಳು ಕೂಡ ಈ ಸಂಸ್ಥೆಯ ವತಿಯಿಂದ ತರಬೇತಿಯ ನ್ನು ಪಡೆದು ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಿ ಎಂದರು.  ತರಬೇತಿ ನಿರ್ದೇಶಕ ರಮೇಶ್ ಚಿಕ್ಕೇರಿ,ಪ್ರೇಮಾ ಜಿಎಂ,ಸಂಯೋಜಕ ಪ್ರೊ.ಕೃಷ್ಣಪ್ಪ,ಪ್ಲೇಸ್ಮೆಂಟ್ ಆಫೀಸರ್ ಡಾ.ಚೇತನ್ ಚೌಹಾನ್,ಉಪನ್ಯಾಸಕರಾದ ಪ್ರೊ.ರವೀಂದ್ರ ಗೌಡ,ಪ್ರೊ.ರಾಧಾ ಸ್ವಾಮಿ,ಡಾ.ಶಿವಕುಮಾರ್,ನೂರುಲ್ಲಾ,ರಮೇಶ್ ಎಚ್.ಕೂಡ್ಲಿಗಿ ಕೊಟ್ರೇಶ್,ಬಸವರಾಜ ಬಣಕಾರ್ ಅರವಿಂದ್,ವಿ ಕೊಟ್ರೇಶ್,ರೂಪ ಮತ್ತು ವಿದ್ಯಾರ್ಥಿಗಳಿದ್ದರು.

ವರದಿ-ವೈ.ಮಹೇಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ