ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆಕ್ರಮವಾಗಿ ಸಂಗ್ರಹಿಸಿಟ್ಟ ಪಡಿತರ ಅಕ್ಕಿ ಮತ್ತು ಅಂಗನವಾಡಿಗಳಿಗೆ ವಿತರಿಸುವ ಪೌಷ್ಟಿಕ ಆಹಾರ ಜಪ್ತಿ

ಬೀದರ್/ಬಸವಕಲ್ಯಾಣ:ನಗರದ ಬಬ್ಬರಬಾಗ್ ಬಡಾವಣೆಯಲ್ಲಿ ಸರ್ಕಾರದಿಂದ ವಿತರಿಸಿದ ಪಡಿತರ ಅಕ್ಕಿ ಮತ್ತು ಅಂಗನವಾಡಿಗಳಿಗೆ ವಿತರಿಸುವ ಪೌಷ್ಟಿಕ ಆಹಾರ ಬೆಳೆಕಾಳು ಇತ್ಯಾದಿ ವಸ್ತುಗಳನ್ನು ಆಕ್ರಮವಾಗಿ ಸಂಗ್ರಹಿಸಿಟ್ಟಿರುವ ಎಂಬ ಖಚಿತ ಮಾಹಿತಿಯ ಮೇರೆಗೆ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಬಸವಕಲ್ಯಾಣ ನಗರ ಠಾಣೆಯ ಪಿ.ಎಸ್.ಐ ಶ್ರೀ ಅಂಬರೀಷ್ ವಾಗ್ಮೊಡೆ ನೇತೃತ್ವದ ಪೊಲೀಸ್ ಅಧಿಕಾರಿಗಳು ಹಾಗೂ ಆಹಾರ ನಿರೀಕ್ಷಕರಾದ ಶ್ರೀ ನಾಗರಾಜ್ ಪಾಟೀಲ್ ಮತ್ತು ಸಿ.ಡಿ.ಪಿ.ಒ ಶ್ರೀ ಗೌತಮ್ ಹಾಗು ಸಿಬ್ಬಂದಿಗಳ ತಂಡ ದಾಳಿ ನಡೆಸಿದರು ದಾಳಿ ವೇಳೆಯಲ್ಲಿ ಆರೋಪಿ ಅಹ್ಮದ್ ನನ್ನು ಬಂಧಿಸಿ ಆತನ ಗೋಡೌನ್ ನಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ಡ ಒಟ್ಟು 26 ಕ್ವಿಂಟಲ್ ಪಡಿತರ ಅಕ್ಕಿ,ತೊಗರಿ ಬೇಳೆ,ಹೆಸರು ಕಾಳು,ಶೇಂಗಾ, ಸಾಸಿವೆ,ಖಾರ,ಉಪ್ಪು,ಅರಿಶಿಣ ಹಾಲಿನ ಪೌಡರ್, ರಾಗಿ,ಬೆಲ್ಲ ಹಾಗೂ ಇತ್ಯಾದಿಗಳು ಹೀಗೆ ಒಟ್ಟು ಸೇರಿ
6 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಜಪ್ತಿ ಮಾಡಿಕೊಂಡು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

ವರದಿ:ಸಂದೀಪ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ