ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಬ್ಬಳ್ಳಿಯಲ್ಲಿ ಸಂಕ್ರಾಂತಿ ಸಂತೆ ಫುಲ್ ಜೋರ್

ಹುಬ್ಬಳ್ಳಿ:ಮಕರ ಸಂಕ್ರಮಣ ಹಿನ್ನೆಲೆ ಹುಬ್ಬಳ್ಳಿ ನಗರದ ಮಾರುಕಟ್ಟೆಗಳು ಜನಜಂಗುಳಿಯಿಂದ ಕೂಡಿವೆ. ಸಂಕ್ರಾಂತಿಯ ಮೊದಲ ದಿನ ಭೋಗಿ ಆಚರಣೆಯ ಸಲುವಾಗಿ ಸಾರ್ವಜನಿಕರು ವಿವಿಧ ವಸ್ತುಗಳನ್ನು ಖರೀದಿಸುತ್ತಿದ್ದಾರೆ.

ಹುಬ್ಬಳ್ಳಿಯ ಜನತಾ ಬಜಾರ್,ದುರ್ಗದಬೈಲ್‌ ಸೇರಿದಂತೆ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಜನರು ಹೂವು, ಹಣ್ಣು, ತರಕಾರಿ, ಕುಸುರೆಳ್ಳು, ಕಬ್ಬು, ಮಾವಿನಕಾಯಿ ಹೀಗೆ ಹಲವಾರು ವಸ್ತುಗಳನ್ನು ಖರೀದಿಸುತ್ತಿದ್ದಾರೆ.

ನಾಳೆ ಬೋಗಿ ಹಬ್ಬದ ಪ್ರಯುಕ್ತ ಬಣ್ಣ ಬಣ್ಣದ ರಂಗೋಲಿ ಬಿಡಿಸಿ ಮಹಿಳೆಯರು ಸಂಭ್ರಮಿಸುತ್ತಾರೆ. ರಂಗೋಲಿ ಸಂಭ್ರಮದ ಜೊತೆ ಶೇಂಗಾ, ಎಳ್ಳಿನ ಹೊಳಿಗೆ ಮಾಡಿ ಹಬ್ಬ ಆಚರಣೆ ಮಾಡುತ್ತಾರೆ, ಅದಲ್ಲದೆ ಅಲಸಂದಿ, ಬಟಾಣಿ, ಕ್ಯಾರೆಟ್, ಬದನೆಕಾಯಿ ಸೇರಿ ವಿವಿಧ ತರಕಾರಿ, ಕಾಳುಗಳನ್ನ ಬಳಸಿ ರುಚಿಕರವಾದ ಪಲ್ಯ ಮತ್ತು ಸಜ್ಜಿ ರೊಟ್ಟಿ ತಯಾರಿಸುತ್ತಾರೆ.

ಮುಖ್ಯವಾಗಿ ಬೋಗಿ ದಿನ ಸಜ್ಜಿ ರೊಟ್ಟಿ ತಯಾರಿಸಲು ಗ್ರಾಮೀಣ ಭಾಗದಲ್ಲಿ ಗ್ಯಾಸ್ ಸ್ಟವ್ ಬಳಸದೇ ಸೌದೆ ಉರಿಸಿ ಅಡುಗೆ ಮಾಡುತ್ತಾರೆ.ಈ ಭಾಗದಲ್ಲಿ ಹಬ್ಬದ ವಿಶೇಷ ಸಜ್ಜಿರೊಟ್ಟೆ ಆಗಿದೆ.

ವರದಿ-ಅಕ್ಷತಾ ಮಿರಜಕರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ