ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿದೆ,ಕೂಡಲೇ ರೂ 25000 ಬೆಳೆ ಪರಿಹಾರ ಹಣವನ್ನು ನೀಡಿ-ವಿಧ್ಯಾಧರ ಜಾಕಾ ವಡಗೇರಾ

ವಡಗೇರಾ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಾಸುದೇವ ಮೇಟಿ ಬಣ ವತಿಯಿಂದ ಬರಗಾಲದ ಪರಿಹಾರ ಹಣವನ್ನು ಆದಷ್ಟು ಬೇಗನೆ ಜಮಾವಣೆ ಮಾಡಬೇಕು ಎಂದು ಮನವಿ ಸಲ್ಲಿಸಿ ನಂತರ ಮಾತನಾಡಿದ,ವಡಗೇರಾ ತಾಲೂಕ ಅಧ್ಯಕ್ಷರಾದ ವಿಧ್ಯಾಧರ ಜಾಕಾ ಬರಗಾಲ ಘೋಷಣೆಯಾಗಿ ಸುಮಾರು ದಿನಗಳು ಕಳೆದರೂ ಕೂಡಾ,ರೈತರಿಗೆ ಬರ ಪರಿಹಾರದ ಹಣ ಜಮಾ ಆಗಿರುವುದಿಲ್ಲ.ಈಗಾಗಲೇ ರೈತರು ಬರಗಾಲದಿಂದ ಕಂಗಾಲಾಗಿದ್ದಾರೆ ಆದರೆ ಸರ್ಕಾರ ಮಾತ್ರ ಇತ್ತ ಕಡೆ ಗಮನ ಹರಿಸದೆ ನಿರ್ಲಕ್ಷಿಸುತ್ತಿದೆ ಮಳೆ ಬಾರದೆ ಬೆಳೆಗಳು ಸಂಪೂರ್ಣ ಹಾಳಾಗಿದ್ದು,ರೈತರು ಸಾಲದ ಸುಳಿಯಿಂದ ಒದ್ದಾಡುತ್ತಿದ್ದಾರೆ.ಕೆಲವು ಕಡೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿವೆ ಈಗಲಾದರೂ ಸರಕಾರ ಎಚ್ಚೆತ್ತುಕೊಂಡು ರೈತರ ಸಮಸೆಯನ್ನು ಅರಿತು ಪ್ರತಿ ಎಕರೆಗೆ 25,000 ಬೆಳೆ ಪರಿಹಾರ ನೀಡಬೇಕು. ಈಗಾಗಲೆ ತುಂಬಾ ವಿಳಂಬವಾಗಿದ್ದು ಕೂಡಲೇ ರೈತರಿಗೆ ಬೆಳೆ ಪರಿಹಾರದ ಹಣವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರು ವಿದ್ಯಾಧರ ಜಾಕ,ಶರಣು ಜಡಿ ಗೌರವಾಧ್ಯಕ್ಷರು,ಸತೀಶ್ ನಾಟೇಕರ್,ಬೀರಣ್ಣ ಜಡಿ,ವೀರೇಶ್ ಗೌಡ,ರಾಜು ಹಿರೇಮಠ್,ಮಲ್ಲು ನಾಟೇಕರ್,ವೆಂಕಪ್ಪ ಇಟ್ಟಿಗಿ,ಅಯ್ಯಳಪ ಜಡಿ,ಅಳ್ಳೆಪ್ಪ ತೇಜಾರ್ ಉಪಸ್ಥಿತರಿದ್ದರು.

ವರದಿ:ಶಿವರಾಜ್ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ