ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿದ್ದರಾಮೇಶ್ವರರ ಕೆರೆ-ಕಟ್ಟೆಗಳ ನಿರ್ಮಾಣ ಕಾರ್ಯ ಇಂದಿಗೂ ಪ್ರಸ್ತುತ-ಅಮರೇಶ್.ಜಿ.ಕೆ.

ಕೊಟ್ಟೂರು:ತಾಲೂಕ ಕಛೇರಿ,ಕೊಟ್ಟೂರಿನ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಜನ-ಜಾನುವಾರುಗಳಿಗೆ, ಪಶು-ಪಕ್ಷಿಗಳಿಗೆ ಕುಡಿಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆರೆ ಕಟ್ಟೆಗಳನ್ನು ಕಟ್ಟಿ ಸಮಾಜ ಮುಖಿಯಾಗಿ ನಡೆದ ಸಿದ್ದರಾಮೇಶ್ವರರ ನಡೆ ಇಂದಿಗೂ ಪ್ರಸ್ತುತವಾಗಿದೆ ಅಂತರ್ಜಲ ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಕೆರೆಗಳನ್ನು ಕಟ್ಟಲು ಸಾಧ್ಯವಾಗದಿದ್ದರೂ,ಹಿಂದಿನವರು ನಿರ್ಮಿಸಿರುವ ಕೆರೆ-ಕಟ್ಟೆಗಳನ್ನು ಹಾಳಾಗದಂತೆ, ಒತ್ತುವರಿಯಾಗದಂತೆ ಸಂಕ್ಷಿಸುವ ಮುಂದಿನ ಪೀಳಿಗೆಗೆ ಉಳಿಸುವ ಹೊಣೆ ನಮ್ಮೆಲ್ಲರದಾಗಿದೆ.ಜನತೆಯ ಕಷ್ಟಗಳನ್ನು ಹತ್ತಿರದಿಂದ ನೋಡಿ ಅವರ ನೋವುಗಳನ್ನು ನಿವಾರಿಸಲು ಶ್ರಮಿಸುತ್ತಾ,ನುಡಿದಂತೆ ನಡೆದಿದ್ದಾರೆ ದುಡಿಮೆಯಲ್ಲಿ ಭಗವಂತನನ್ನು ಕಾಣಬೇಕು ಕಷ್ಟಬಂದಾಗ ಕೊರಗದೇ ಸಹಿಷ್ಣುವಾಗಿ ಬದುಕಬೇಕೆಂದು ಸಂದೇಶ ನೀಡಿ ಸಮತೆಯ ಗಾರುಡಿಗರಾಗಿದ್ದರು ಒಬ್ಬರನ್ನು ಮೋಸಮಾಡಿ ತೋರಿಕೆಗೆ ಕಾಣುವಂತೆ ಡಾಂಬಿಕತನದಿಂದ ಪೂಜೆ ಮಾಡಿದರೆ ಅರ್ಥವಿಲ್ಲ ಎಂದು ಎಚ್ಚರಿಸಿದ್ದರು ಅವರ ಸಿದ್ದಾಂತಗಳನ್ನು,ಆದರ್ಶಗಳನ್ನು ಅರ್ಥಮಾಡಿಕೊಂಡು ಬಾಳಿದರೆ ಅವರನ್ನು ಅನುಸರಿಸಿದರೆ ಸಾರ್ಥಕತೆ ಬರುತ್ತದೆ ಎಂದು ಅಮರೇಶ್ ಜಿ ಕೆ ತಹಶೀಲ್ದಾರರು ತಿಳಿಸಿದರು.
ಮಂಜುನಾಥ ಸಿ.ಆರ್.ಪಿ. ಮಾತನಾಡಿದರು. ಕಾರ್ಯಕ್ರಮದಲ್ಲಿ ನಾಗೇಶ ಡಿ ಭೋವಿ ಸಮಾಜದ ಗೌರವಾಧ್ಯಕ್ಷರು,ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರಾದ ಪಿ ಹೆಚ್ ರಾಘವೇಂದ್ರ,ಡಿ.ನಾಗೇಶ,ಭೋವಿ ಸಮಾಜದ ಮುಖಂಡರಾದ ಯರ್ರಿಸ್ವಾಮಿ,ಪಿ ಹೆಚ್ ಎಸ್ ಶಶಿಧರ, ಬಿ ಮನೋಹರ,ಚಿರಂಜೀವಿ,ಕಂದಾಯ ನಿರೀಕ್ಷಕರಾದ ಹಾಲಸ್ವಾಮಿ ಎಸ್ ಎಂ,ಹರೀಶ್ ಗ್ರಾ.ಆ.ಅ.ವಿಷಯ ನಿರ್ವಾಹಕ ವಿಜಯಕುಮಾರ ಪುಟಾಣಿ,ಶರಣಪ್ಪ ಹಾಗೂ ಇತರರು ಇದ್ದರು.ಸಿ.ಮ.ಗುರುಬಸವರಾಜ ಸ್ವಾಗತಿಸಿ ನಿರೂಪಿಸಿದರು.

ವರದಿ:ವೈ.ಮಹೇಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ