ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ರವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು-ಸಂಗಮೇಶ ಎನ್ ಜವಾದಿ

ಬೀದರ/ಭಾಲ್ಕಿ:ನಾಲ್ಕು ಬಾರಿ ಶಾಸಕರಾಗಿ,ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ,ರಾಜ್ಯಾದ್ಯಂತ ಸಂಚರಿಸಿ ಕಾಂಗ್ರೆಸ್ ಪಕ್ಷವನ್ನು ಕೆಳಮಟ್ಟದಿಂದ ಬಲಿಷ್ಠವಾಗಿ ಸಂಘಟಿಸಿ,ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಕೀರ್ತಿ ಮತ್ತು ಶ್ರೇಯಸ್ಸು ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ರವರಿಗೆ ಸಲ್ಲುತ್ತದೆ ಎಂದು ಸಾಹಿತಿ ಸಂಗಮೇಶ ಎನ್ ಜವಾದಿ ಹೇಳಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ
ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹಗಲಿರುಳು ಸೇವೆಯನ್ನು ಸಲ್ಲಿಸಿದ ಅಪ್ರತಿಮ ಜನನಾಯಕರು ಈಶ್ವರ ಖಂಡ್ರೆ ಎಂಬುದನ್ನು ಯಾವತ್ತೂ ಕಾಂಗ್ರೆಸ್ ಹೈಕಮಾಂಡ್ ಮರೆಯಬಾರದು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದ ಜನ್ನ ಮನ್ನಣೆಯ ಜನನಾಯಕರಾದ ಈಶ್ವರ ಖಂಡ್ರೆಯವರನ್ನು ಆದಷ್ಟು ಬೇಗ ರಾಜ್ಯದ ಉಪ ಮುಖ್ಯಮಂತ್ರಿ ಮಾಡಬೇಕು ಈ ಮೂಲಕ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ ನೀಡಿದಂತಾಗುತ್ತದೆ.
ಅಲ್ಲದೆ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ನಾಯಕರಿಗೆ ಗೌರವ ಕೊಟ್ಟಿದಂಗಾಗುತ್ತದೆ. ಆದಕಾರಣ ರಾಷ್ಟ್ರೀಯ ನಾಯಕರು ಪಕ್ಷ ನಿಷ್ಠರಿಗೆ ಹಾಗೂ ಲಿಂಗಾಯತ ಧರ್ಮದವರಿಗೆ ಸೂಕ್ತ ಸ್ಥಾನಮಾನ ನೀಡುವುದರ ಮೂಲಕ ಗೌರವ ನೀಡಬೇಕೆಂದು ಈ ಮೂಲಕ ಪತ್ರ ಬರೆದು ವಿನಂತಿಸುತ್ತಿದ್ದೇವೆ ಎಂದರು.
ಹೀಗಾದಾಗ ಮಾತ್ರ ಮುಂದೆ ಜರುಗುವ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಬಹುದು ಹಾಗೆಯೇ
ಜನಪ್ರಿಯತೆಯ ಉತ್ತುಂಗದಲ್ಲಿ ಇರುವ ಈಶ್ವರ ಖಂಡ್ರೆಯವರನ್ನು ಆದಷ್ಟು ಬೇಗ ಉಪ ಮುಖ್ಯಮಂತ್ರಿ ಮಾಡಬೇಕು ಈ ಕುರಿತು ರಾಹುಲ್ ಗಾಂಧಿಜೀಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಕ್ರಮ ಕೈಗೊಂಡು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಸೂಚಿಸಿ,ಉಪ ಮುಖ್ಯಮಂತ್ರಿಯನ್ನಾಗಿ ಮಾಡಲು ತಿಳಿಸಬೇಕು ಎಂದು ಸಾಹಿತಿ,ಸಾಮಾಜಿಕ ಸೇವಕರು,ಪರಿಸರ ಸಂರಕ್ಷಕರಾದ ಸಂಗಮೇಶ ಎನ್ ಜವಾದಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ