ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ಸಮಾವೇಶದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಾಗಲಕೋಟೆ:ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಜರುಗಿದ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಸಿರಿಧಾನ್ಯಗಳು ಅದ್ಭುತ ಆಹಾರ ಅವುಗಳನ್ನು ಬಳಸಿ ಆರೋಗ್ಯ ಸಿರಿಯನ್ನುಹೆಚ್ಚಿಸಿಕೊಳ್ಳಿ ಎಂಬ ಅಮೂಲ್ಯವಾದ ಪ್ರಬಂಧವನ್ನು ಮಂಡಿಸಿ ನಿರ್ಣಾಯಕರ ಮೆಚ್ಚುಗೆಗೆ ಪಾತ್ರವಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ಬಾಗಲಕೋಟ ತಾಲೂಕಿನ ಶ್ರೀ ಸಿದ್ದೇಶ್ವರ ಪ್ರೌಢಶಾಲೆ ಶಿರೂರ ನ ವಿದ್ಯಾರ್ಥಿನಿಯರಾದ ಕುಮಾರಿ ಸಹನಾ ಎಸ್ ಕೊಣ್ಣೂರ ಹಾಗೂ ಕುಮಾರಿ ರೇಣುಕಾ ವಾಯ್ ಹಿರೇಕುಂಬಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಕ್ಕಾಗಿ ಸೇಡಂನ ಶ್ರೀಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂರಕ್ಷಕ ರಾ ದ ಮಾಜಿ ರಾಜ್ಯಸಭಾ ಸದಸ್ಯ ಬಸವರಾಜ್ ಪಾಟೀಲ್ ಸೇಡಂ ಅವರಿಂದ ಬಹುಮಾನ ಸ್ವೀಕರಿಸಿದರು ಇವರಿಗೆ ಮಾರ್ಗದರ್ಶನ ಮಾಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಳ್ಳಲು ಕಾರಣೀಭೂತರಾದ ಶಿರೂರು ಸಿದ್ದೇಶ್ವರ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಸಂಜಯ್ ನಡುವಿನಮನಿ ಮಾರ್ಗದರ್ಶನ ಮಾಡಿದ್ದಾರೆ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ಮಾಡಿದ ಶಿಕ್ಷಕರಿಗೆ ಸಿದ್ದೇಶ್ವರ ಪ್ರೌಢಶಾಲೆಯ ಮುಖ್ಯ ಗುರುಗಳು ಹಾಗೂ ಸಮಸ್ತ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ