ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ.ಕ.ನಗರ ಮತ್ತು ಗ್ರಾಮೀಣ ಅಭಿವೃದ್ದಿ ಚಾರಿಟೇಬಲ್ ಟ್ರಸ್ಟ್ ಉದ್ಘಾಟನಾ ಸಮಾರಂಭ

ಕಲಬುರಗಿ:ಕಲ್ಯಾಣ ಕರ್ನಾಟಕ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಚಾರಿಟೇಬಲ ಟ್ರಸ್ಟ್ ಉದ್ಘಾಟನಾ ಸಮಾರಂಭ ಇಲ್ಲಿನ ಜಗತ್ ವೃತ್ತದ ಆಮಂತ್ರಣ ಹೋಟೆಲನಲ್ಲಿ ನಡೆಯಿತು.ದಿವ್ಯಸಾನಿಧ್ಯವನ್ನು ವಹಿಸಿಕೊಂಡ ಗದಗ ಬಸಯ್ಯ ಶಾಸ್ತ್ರಿಗಳು ಮಾತನಾಡಿ ಅಂಧರು, ಅನಾಥರಿಗೆ ಸಂಗೀತ ಕಲಿಸಿ ವಿದ್ಯೆ,ಅನ್ನದಾನ ಮಾಡಿ, ವಸತಿ ನೀಡಿ ಸರ್ವರ ಬಾಳಿಗೆ ಬೆಳಕಾಗಬೇಕು.ಕಲ್ಯಾಣ ಕರ್ನಾಟಕ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಹೆಸರಿನ ಟ್ರಸ್ಟ್ ಉತ್ತಮವಾಗಿ ಬೆಳೆಯಲಿ’ ಎಂದು ಆಶಿಸಿದರು.
ಉತ್ತಮ ಸದುದ್ದೇಶದಿಂದ ಟ್ರಸ್ಟ್ ಆರಂಭಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.ಪದಾಧಿಕಾರಿಗಳು ನಿರಂತರವಾಗಿ ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮಹಿಳೆಯರು,ಯುವಜನರು ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಮಾಜ ಸೇವಕರಾದ ಶಾಂತಕುಮಾರ ಬಿರಾದಾರ ಉದ್ಘಾಟಿಸಿರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಜಪ ಮುಖಂಡ ಅಂಬರಾಯ ಬೆಳಕೋಟಾ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಬಾಜಪ ಮುಖಂಡ ಉದಯಕುಮಾರ ರಟಕಲ,ದಲಿತ ಮುಖಂಡ ಎಸ್.ಜಿ.ಭಾರತಿ,ಡೊಂಗರಗಾಂವ ಗ್ರಾಮ ಪಂಚಾಯತ ಸದಸ್ಯ ಅನೀಲಕುಮಾರ ಡೊಂಗರಗಾಂವ ಕಾರ್ಯಕ್ರಮದ ನೇತೃತ್ವವನ್ನು ಮಧುಕರ ವಿ.ಕಾಂಬಳೆ ವಹಿಸಿದ್ದರು.ನಿರೂಪಣೆಯನ್ನು ಸಿದ್ದಾರ್ಥ ಚಿಂಚನಸೂರ ನಿರೂಪಿಸಿದರು.ಟ್ರಸ್ಟನ ಕಾರ್ಯದರ್ಶಿ ಅಶ್ವಿನಿ ಎಂ.ಕಾಂಬಳೆ ಇದ್ದರು.
ಈ ಸಂದರ್ಭದಲ್ಲಿ ಜೈರಾಜ ಕಿಣಗಿಕರ್,ರವಿ ಸಿಂಗೆ,ಆನಂದ ತೆಗನೂರ,ಸುನೀಲಕುಮಾರ ಕಾಂಬಳೆ,ಅರುಣಕುಮಾರ ಸೇರಿದಂತೆ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ