ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವಕರ್ಮ ಕುಲಶಾಸ್ತ್ರ ಅಧ್ಯಯನ ಸಂವಾದ ಹಾಗೂ ಪತ್ರಿಕಾಗೋಷ್ಠಿ ಕಾರ್ಯಕ್ರಮ

ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಸರಕಾರಿ ನೌಕರರ ಭವನದಲ್ಲಿ ಸೋಮವಾರ ಡಿ.ದೇವರಾಜು ಅರಸು ಸಂಶೋಧನಾ ಸಂಸ್ಥೆ ಬೆಂಗಳೂರು ಇವರ ವಿಶ್ವಕರ್ಮ ಮತ್ತು ಅದರ ಉಪಜಾತಿಗಳ ಕುಲಶಾಸ್ತ್ರ ಅಧ್ಯಯನ (ಮೈಸೂರು ವಿದ್ಯಾಲಯದ ಪ್ರೊ.ಡಾ.DC ನಂಜುಂಡ,ಡಾ.ಮಹಾದೇವ ಹಾಗೂ ಡಾ.ಕೃಷ್ಣಮೂರ್ತಿ ಅವರ ನೇತೃತ್ವದ ತಂಡದಿಂದ ರಾಯಚೂರು ನಗರದ ಸರಕಾರಿ ನೌಕರರ ಭವನದಲ್ಲಿ ಸಂವಾದ ಹಾಗೂ ಪತ್ರಿಕಾಗೋಷ್ಠಿ ಕಾರ್ಯಕ್ರಮ ನೆರವೇರಿತು.
ಪ್ರೊ.ಶ್ರೀ DC ನಂಜುಂಡ ಅವರ ನೇತೃತ್ವದ ವಿಶ್ವಕರ್ಮ ಕುಲಶಾಸ್ತ್ರ ಅಧ್ಯಯನ ತಂಡ ವಿಶ್ವಕರ್ಮ ಜನಾಂಗದವರ ಇತಿಹಾಸ ಮತ್ತು ಅವರ ಮೂಲ ಆಚಾರ ವಿಚಾರ ಪದ್ಧತಿ,ಧಾರ್ಮಿಕ ಸಂಸ್ಕೃತಿ ಮತ್ತು ಹಲವಾರು ನಡವಳಿಕೆಗಳ ಇಂದಿನ ಆರ್ಥಿಕ ಶೈಕ್ಷಣಿಕ, ರಾಜಕೀಯ,ಔದ್ಯೋಗಿಕ,ಸಾಮಾಜಿಕ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.ಇಂದಿನ ಈ ಸಭೆಯಲ್ಲಿ ಸಮಾಜದ ಜಿಲ್ಲೆಯ ಹಲವಾರು ಜನ ಉಪಸ್ಥಿತರಿದ್ದು ತಮ್ಮ ತಮ್ಮ ವಿವಿಧ ರೀತಿಯ ಆಚಾರ,ಕಲೆ,ಸಾಹಿತ್ಯ, ಸಾಂಸ್ಕೃತಿಕ,ಧಾರ್ಮಿಕತೆಯ ಹಾಗೂ ಸಾಧನೆಗಗಳ ವಿಚಾರಗಳ ಅಭಿಪ್ರಾಯಗಳನ್ನು ಕುಲಶಾಸ್ತ್ರ ಅಧಿಕಾರಿಗಳ ಮುಂದೆ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಎಲ್ಲಾ ತಾಲೂಕುಗಳಿಂದ ಕುಲಶಾಸ್ತ್ರದ ಪಾರಂಗಳನ್ನು ನೀಡಿ ಸಮಾಜದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಇದೇ ಸಂದರ್ಭದಲ್ಲಿ ರಾಯಚೂರು,ಸಿಂಧನೂರು, ಮಸ್ಕಿ,ಲಿಂಗಸೂಗೂರು,ಶಿರವಾರ,ದೇವದುರ್ಗ,ಮಾನವಿ ತಾಲೂಕುಗಳ ವಿಶ್ವಕರ್ಮ ಮುಖಂಡರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ