ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ಹನೂರು:ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಶಾಸಕರಾದ ಎಂ.ಆರ್.ಮಂಜುನಾಥ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿ
75ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ವಾಗಿ ಆಚರಣೆ ಮಾಡಲಾಗಿದೆ,ಸ್ವಾತಂತ್ರ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸುವ ದಿನವಾಗಿದೆ ಯುವ ನಾಗರಿಕರು ದೇಶದ ಭವಿಷ್ಯವನ್ನು ಕಟ್ಟುವ ಕೆಲಸವಾಗಬೇಕು.ಈ ದೆಸೆಯಲ್ಲಿ ನಾವೆಲ್ಲರೂ ಸಂಕಲ್ಪ ಮಾಡಬೇಕಾಗಿದೆ,ಜಾತಿ ಧರ್ಮ,ಜನಾಂಗವನ್ನು ಬದಿಗಿಟ್ಟು ಎಲ್ಲರೂ ಒಂದೇ ಎನ್ನುವ ಭಾವನೆಯನ್ನು ಮೂಡಿಸಬೇಕು.ನಮ್ಮ ದೇಶ ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿದೆ ಅಭಿವೃದ್ಧಿ ಹೊಂದಲು ರಾಷ್ಟ ನಿರ್ಮಿಸುವ ನಿಟ್ಟಿನಲ್ಲಿ,ದೇಶಕೋಸ್ಕರ ಹಲವು ಮಹನೀಯರ ಕೊಡುಗೆ ಇದೆ,ಗಣರಾಜ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ,ಅರ್ಥ ಪೂರ್ಣವಾದ ಸಂವಿಧಾನವನ್ನು ನಮಗೆ ಕೊಡುಗೆ ಯಾಗಿ ನೀಡಿದ್ದಾರೆ ನಿಜಕ್ಕೂ ನಾವು ಹೆಮ್ಮೆ ಪಡುವ ಸಂಗತಿಯಾಗಿದೆ,ಈ ನಿಟ್ಟಿನಲ್ಲಿ ನಾವೆಲ್ಲರೂ ಸಹ ಸಂವಿಧಾನದ ಮಹತ್ವ ವನ್ನು ಅರಿತು ಕೊಳ್ಳಬೇಕಾಗಿದೆ,ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಜೀವನದ ಚೈತನ್ಯ ವಾಗಿದೆ, ಸಂವಿಧಾನದ ರಕ್ಷಣೆ ಮಾಡುವದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ವಿವಿಧ ಶಾಲೆಯ ಮಕ್ಕಳಿಂದ ಪಥ ಸಂಚಲನ ಕಾರ್ಯಕ್ರಮ ಗಮನ ಸೆಳೆಯಿತು.
ಸೈನಿಕ ಸೇವೆಯಲ್ಲಿ ಶೌರ್ಯ ಚಕ್ರ ಪ್ರಶಸ್ತಿಯನ್ನು ಪಡೆದು ನಿವೃತ್ತಿಯಾಗಿರುವ ಸೈನಿಕರಾದ ಲೂಯಿಸ್ ಪೇರಿಯನಾಯಗಮ್ ಹಾಗೂ ಮಾಜಿ ಸೈನಿಕ ಗಂಗಾಧರ್ ಅವರನ್ನು ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವಿವಿಧ ಶಾಲೆಯ ಮಕ್ಕಳಿಂದ ನಡೆದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಅಧ್ಯಕ್ಷ ತಹಶೀಲ್ದಾರ್ ವೈ.ಕೆ ಗುರುಪ್ರಸಾದ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್,ಗ್ರೇಡ್ 2ತಹಶೀಲ್ದಾರ್ ಧನಂಜಯ,ಪಟ್ಟಣ ಪಂಚಾಯತಿ ಸದಸ್ಯರಾದ ಮಹೇಶ್,ಸಂಪತ್ ಕುಮಾರ್, ಸೋಮಶೇಖರ್,ಪವಿತ್ರ,ಆನಂದ್ ಕುಮಾರ್, ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಂದ್ರಮ್ಮ,ಮಹಿಳಾ ಮತ್ತು ಮಕ್ಕಳ ಇಲಾಖೆ ನಂಜ ಮಣಿ,ನಿವೃತ್ತ ಸೈನಿಕರಾದ ಗಂಗಾಧರ್,ಲೂಯಿಸ್ ಪೆರಿಯನಾಯಗಮ್ ಇನ್ನಿತರ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ