ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

75 ನೇಯ ಗಣರಾಜ್ಯೋತ್ಸವ ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಬಲಿದಾನ ದಿವಸ ಆಚರಣೆ

ಗದಗ:ಸಮೀಪದ ತಿಮ್ಮಾಪೂರ ಗ್ರಾಮದಲ್ಲಿ 75 ನೇಯ ಗಣರಾಜ್ಯೋತ್ಸವ ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಬಲಿದಾನ ದಿವಸವನ್ನು ವಿವಿಧ ಸಂಘ ಸಂಸ್ಥೆಗಳು ಭಕ್ತಿ ಪೂರ್ವಕವಾಗಿ ಆಚರಿಸಿದರು.
ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆ ಮುಂದೆ ಧ್ವಜಾರೋಹಣವನ್ನು ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಮೊದಲು ಕಿಡಿ ಹೊತ್ತಿಸಿದ್ದು ಸಂಗೊಳ್ಳಿ ರಾಯಣ್ಣ ಇವರ ಧೈರ್ಯ ಶೌರ್ಯ ಪರಾಕ್ರಮಗಳು ಬ್ರಿಟಿಷರನ್ನು ನಿದ್ದೆಗೆಡಿಸಿದ್ದವು ಎಂದು ಹೇಳಿದರು.
ಯುವಕರು ರಾಯಣ್ಣನ ಗುಣಗಳನ್ನು ಮೈಗೂಡಿಸಿಕೊಂಡು ಭಾರತದ ಶ್ರೇಷ್ಠತೆಯನ್ನು ಎತ್ತಿಡಿಯಲು ದೃಢಸಂಕಲ್ಪ ಮಾಡಬೇಕು ಯುವಕರು ಈ ದೇಶದ ಶಕ್ತಿ ಎಲ್ಲಾ ಯುವಜನತೆ ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರಾದ ರಾಮಪ್ಪ ಹುಚ್ಚಪ್ಪನವರ,ಶರಣಪ್ಪ ಜೋಗಿನ, ಯಲ್ಲಪ್ಪ ಜೋಗಿನ,ಕುಬೇರಗೌಡ ಪಾಟೀಲ,ಮಲ್ಲಪ್ಪ ಮಾಳಗುಂಡರ,ರಾಮಪ್ಪ ಗುಡ್ಲಾನೂರ,ಕನಕಪ್ಪ ತಳವಾರ,ಯಲ್ಲಪ್ಪ ಯತ್ನಟ್ಟಿ,ಕರಿಯಪ್ಪ ಬಾಬರಿ,ರಾಮಣ್ಣ ಖಂಡ್ರಿ,ರಾಮಣ್ಣ ಕುರಡಗಿ,ರಾಜು ಚವಾಣ,ಈರಣ್ಣ ಕಮತರ,ಜೆ ಜೆ ಹೀರೆಹಾಳ,ಮಂಜು ಬಸರಿಕಟ್ಟಿ ಹಾಗೂ ಇನ್ನೂ ಅನೇಕ ಸಂಘದ ಪದಾಧಿಕಾರಿಗಳು ಮತ್ತು ಪ್ರಾಥಮಿಕ ಶಾಲಾ ಮಕ್ಕಳು ಹಾಗೂ ಕನಕದಾಸ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ