ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೊಬೈಲ್ ದೂರ ಇಡಿ ಪುಸ್ತಕ ಕಡೆ ಗಮನ ಇಡಿ:ಕಟ್ಟಾನರಸಿಂಹಮೂರ್ತಿ

ಎಸ್.ಎಂ.ಆಂಗ್ಲ ಮಾಧ್ಯಮ ಶಾಲೆಯ 25ನೇ ಶಾಲಾ ವಾರ್ಷಿಕೋತ್ಸವ

ಪಾವಗಡ:ತಾಲ್ಲೂಕಿನ ವೈ.ಎನ್.ಹೊಸಕೋಟೆ ವೈ.ಎನ್.ಹೊಸಕೋಟೆ ಗ್ರಾಮದ ಮಾಧವ ವಿದ್ಯಾ ಸಂಸ್ಥೆಯ ಎಸ್.ಎಂ.ಆಂಗ್ಲ ಮಾಧ್ಯಮ ಶಾಲೆಯ 25ನೇ ಶಾಲಾ ವಾರ್ಷಿಕೋತ್ಸವ ಹಾಗೂ ಬೆಳ್ಳಿ ಉತ್ಸವ ಸಮಾರಂಭವನ್ನು ಕೆ.ಇ.ಬಿ. ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಟ್ಟಾನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮೊಬೈಲ್ ದೂರ ಇಡಿ ಪುಸ್ತಕದ ಕಡೆ ಹೆಚ್ಚಿನ ಗಮನ ನೀಡಿ ವಿದ್ಯಾರ್ಥಿಗಳಿಗೆ ಎಂದು ಕಿವಿಮಾತು ತಿಳಿಸಿದರು.
ಹಲವಾರು ವಿದ್ಯಾರ್ಥಿಗಳು ಕೇವಲ ಮೊಬೈಲ್,ಟಿವಿ, ಗೆ ಅಂಟಿಕೊಂಡಿರುತ್ತಾರೆ ಬಿಟ್ಟು ಓದಿನ ಕಡೆ ಗಮನಹರಿಸಬೇಕು ಹೆಚ್ಚಿನ ಪುಸ್ತಕಗಳನ್ನು ಓದಲು ಸಮಯ ನೀಡಬೇಕು ಶಿಕ್ಷಕರು ಬೋಧಿಸುವ ಪಾಠ ಗಮನವಿಟ್ಟು ಕೇಳಿಸಿಕೊಂಡು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯಬೇಕು ಮೂಲಕ ಉನ್ನತ ಅಧಿಕಾರಿಗಳಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಗಡಿಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ರೂಪಿಸಿ ಕಳೆದ 25 ವರ್ಷಗಳಿಂದ ಉತ್ತಮ ಗುಣಮಟ್ಟ ಶಿಕ್ಷಣವನ್ನುಮಾಧವ ವಿದ್ಯಾ ಸಂಸ್ಥೆಯ ನೀಡುತ್ತಾ ಬರುತ್ತಿದೆ ಎಂದರು.
ಇದೇ ವೇಳೆ ಶಾಲಾ ಮಕ್ಕಳಿಂದ ವಿವಿಧ ಮನರಂಜನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ಪೋಷಕರಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು ಇದರಲ್ಲಿ ವಿಜೇತರಾದ ಪೋಷಕರಿಗೆ ಬಹುಮಾನವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಎಂ.ಶಾಲೆಯ ಅಧ್ಯಕ್ಷ ಜೆ.ಮಧುಸೂದನ್,ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ,ಗ್ರಾಮ ಪಂಚಾಯಿತಿ ಅಧ್ಯಕ್ಷ ಸೈಯದ್ ಶಾನವಾಜ್,ರಾಷ್ಟ್ರೀಯ ವಿದ್ಯಾಪೀಠ ಸಂಸ್ಥೆಯ ಕಾರ್ಯದರ್ಶಿ ಎನ್.ಆರ್.ಅಶ್ವತ್ ಕುಮಾರ್, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ